ಮೂಡುಬಿದಿರೆ: ತನ್ನ ಕರ್ತವ್ಯದ ಮೂಲಕ ಇಲಾಖೆ ಹಾಗೂ ಸಾರ್ವಜನಿಕ ವಲಯದಲ್ಲಿ ‘ಖಡಕ್ ಖಾಕಿ’ ಎಂದೇ ಕರೆಸಿಕೊಂಡಿರುವ ಸಂದೇಶ್ ಪಿ. ಜಿ. ಅವರು ಮೂಡುಬಿದಿರೆಯ ನೂತನ ಇನ್ಸ್ಪೆಕ್ಟರ್ ಆಗಿ ನೇಮಕಗೊಂದಿದ್ದಾರೆ.
ಕಳೆದ ಹಲವು ಸಮಯಗಳಿಂದ ಮೂಡುಬಿದಿರೆ ಇನ್ಸ್ಪೆಕ್ಟರ್ ಆಗಿ ಸಂದೇಶ್ ಅವರು ಬರುತ್ತಾರೆನ್ನುವ ಮಾಹಿತಿ ಇತ್ತಾದರೂ ಇಂದು ಅದು ಅಧಿಕೃತಗೊಂಡಿದೆ..
ಈ ಹಿಂದೆ ಕಾರ್ಕಳ, ಬೆಳ್ತಂಗಡಿ, ಬಜ್ಪೆ ಹಾಗೂ ಇನ್ನಿತರ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸಿರುವ ಸಂದೇಶ್ ಅವರು ತಮ್ಮ ದಕ್ಷತೆಯ ಕರ್ತವ್ಯದ ಮೂಲಕ ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕರ ಮೆಚ್ಚುಗೆ ಗಳಿಸಿದ್ದರು. ಯಾರೊಂದಿಗೂ ರಾಜಿ ಮಾಡಿಕೊಳ್ಳದೆ ಕಾನೂನು ಹೇಗಿದೆಯೋ ಅದನ್ನು ಪಾಲಿಸಿ ಕೊಂಡು ಬಂದು, ಕಾನೂನಿಗೆ ಭಂಗತರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದು ಸಂದೇಶ್ ಅವರ ಸ್ವಭಾವ. ಇದೇ ಕಾರಣಕ್ಕೆ ಕಳ್ಳರು, ದರೋಡಕೋರರು, ಕಾನೂನು ಕೈಗೆತ್ತಿಕೊಳ್ಳುವವರಿಗೆ ಸಿಂಹಸ್ವಪ್ನರಾಗಿದ್ದಾರೆ.
ಇ0ತಹ ದಕ್ಷ ಅಧಿಕಾರಿ ಮೂಡುಬಿದಿರೆಗೊಮ್ಮೆ ಬರಲೇ ಬೇಕೆನ್ನುವುದು ಈ ಭಾಗದ ಜನರ ಆಶಯವಾಗಿತ್ತು. ಇದೀಗ ಓರ್ವ ನಿಷ್ಠಾವಂತ, ದಕ್ಷ ಅಧಿಕಾರಿ ಮೂಡುಬಿದಿರೆಯ ಇನ್ಸ್ಪೆಕ್ಟರ್ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಮೂಡುಬಿದಿರೆಗೆ ಸಂದೇಶ್ ರಂತಹ ಖಡಕ್ ಅಧಿಕಾರಿಯ ಅವಶ್ಯವಿತ್ತು. ಇನ್ನು ಕೆಲವು ಕ್ರೈಮ್, ಅಕ್ರಮ ಚಟುವಟಿಕೆಗಳು, ಮಾದಕ ವ್ಯಸನಿಗಳಿಗೆ, ಉಂಡಾಡಿಗು0ಡರಾಗಿ ಕಾನೂನು ಕೈಗೆತ್ತಿಕೊಳ್ಳುವವರಿಗೆ ಮೂಡುಬಿದಿರೆಯಲ್ಲಿ ಖಂಡಿತ ಅವಕಾಶ ವಿಲ್ಲ ಎನ್ನುವ ಅಭಿಪ್ರಾಯಗಳು ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ.
ಮೂಡುಬಿದಿರೆಯಲ್ಲಿ ಇನ್ಸ್ಪೆಕ್ಟರ್ ಆಗಿರುವ ನಿರಂಜನ್ ಅವರು ಸಕಲೇಶಪುರ ಗ್ರಾಮಾಂತರ ಇನ್ಸ್ಪೆಕ್ಟರ್ ಆಗಿ ವರ್ಗಾವಣೆಗೊಂಡಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…