ಮುಲ್ಕಿ: ಪಕ್ಷಿಕೆರೆ ಸಮೀಪದ ಕೊಯಿಕುಡೆ ಮದರ್ ತೆರೇಸಾ ಲೇಔಟ್ ನಲ್ಲಿ ವಾಸ್ತವ್ಯ ವಿರುವ ಶೀಲತಾ ಪೂಜಾರಿ ಎಂಬವರ ಮನೆಯಿಂದ ಕಳ್ಳರು ಲಕ್ಷಾಂತರ ಮೌಲ್ಯದ ನಗ -ನಗದನ್ನು ಕಳ್ಳತನ ಮಾಡಿದ್ದಾರೆ.
ಶೀಲತಾ ರವರ ಮನೆಯಲ್ಲಿ ಮೂರು ಮಂದಿ ದೊಡ್ಡವರು ಸಹಿತ ಇಬ್ಬರು ಮಕ್ಕಳು ವಾಸ್ತವ್ಯವಿದ್ದು ಶನಿವಾರ ನಾಗರಪಂಚಮಿ ಪ್ರಯುಕ್ತ ತಮ್ಮ ತವರು ಮನೆಗೆ ಹೋಗಿದ್ದರು.
ಆದರೆ ಮನೆಯವರು ಮಂಗಳವಾರ ಬಂದು ನೋಡಿದಾಗ ಮನೆಯಲ್ಲಿ ಕಳ್ಳತನ ನಡೆದದ್ದು ಬೆಳಕಿಗೆ ಬಂದಿದೆ.
ಕಳ್ಳರು ಮನೆಯ ಹಿಂಬದಿಯ ಅಡಿಗೆ ಕೋಣೆಯ ಕಬ್ಬಿಣದ ಗ್ರಿಲ್ಸ್ ನ್ನು ಮೆಷಿನ್ ನಲ್ಲಿ ತುಂಡರಿಸಿ ಒಳಗಡೆ ಬಂದು ಹಿಂಬಾಗಿಲನ್ನು ಒಡೆದು ಎರಡು ಕೋಣೆಗಳನ್ನು ಜಾಲಾಡಿ ಒಂದು ಕಪಾಟಿನ ಬೀಗ ಒಡೆದು ಅದರಲ್ಲಿದ್ದ ವಸ್ತುಗಳನ್ನು ಚಲ್ಲಾಪಿಲ್ಲಿ ಮಾಡಿ ಸುಮಾರು ಐದು ಲಕ್ಷ ಮೊತ್ತದ ನಗ ನಗದನ್ನು ಕಳವು ಮಾಡಿ ಹಿಂಭಾಗದಿಂದ ತೆರಳಿದ್ದಾರೆ.
ಶನಿವಾರ ಮನೆಯಲ್ಲಿದ್ದವರು ನಾಗರಪಂಚಮಿಗೆ ಹೋಗಿದ್ದರೂ ಭಾನುವಾರ ಮಧ್ಯಾಹ್ನ ಶೀಲತಾ ರವರ ಮಾವ ಜಯಶೀಲ ಪೂಜಾರಿ ಮನೆಗೆ ಬಂದು ನೋಡಿ ಪಂಜ ಮೊಗೆಪಾಡಿಯಲ್ಲಿರುವ ತಮ್ಮ ಹಳೆ ಮನೆಗೆ ಹೋಗಿದ್ದರು.
ಆದರೆ ಮಂಗಳವಾರ ಮಧ್ಯಾಹ್ನ ಶೀಲತಾರವರು ಮನೆಗೆ ಬಂದು ನೋಡಿದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ.
ಸ್ಥಳಕ್ಕೆ ಕೆಮ್ರಾಲ್ ಗ್ರಾ.ಪಂ. ಅಧ್ಯಕ್ಷ ಮಯ್ಶದ್ದಿ, ಸದಸ್ಯ ಸುರೇಶ್ ಪಂಜ, ಮುಲ್ಕಿ ಪೊಲೀಸರು,ಶ್ವಾನ ದಳ ಬೆರಳಚ್ಚುತಜ್ಞರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಪೊಲೀಸ್ ಶ್ವಾನ ಮನೆ ಹಿಂಬಾಗಲಿನಿಂದ ಒಳಗೆ ಬಂದು ಬಳಿಕ ಮನೆ ಹಿಂಭಾಗದ ಗುಡ್ಡೆ ಬದಿಗೆ ಹೋಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಶೀಲತ ರವರ ಪತಿ ಭರತ್ ರಾಜ್ ಪೂಜಾರಿ ಕಳೆದ ಕೆಲ ದಿನಗಳ ಹಿಂದೆ ವಿದೇಶಕ್ಕೆ ಹೊಸ ಉದ್ಯೋಗಕ್ಕೆ ತೆರಳಿದ್ದು ಮನೆಯಲ್ಲಿ ನಡೆದ ಘಟನೆ ಬರ ಸಿಡಿಲಿನಂತೆ ಎರಗಿದ್ದು ಮನೆಯವರು ಕಂಗಾಲಾಗಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…