ಜನ ಮನದ ನಾಡಿ ಮಿಡಿತ

Advertisement

ತೀರ್ಥಂಕರರ ಪರಂಪರೆಯಲ್ಲಿ 23ನೆಯವರಾದ ಭ| ಪಾರ್ಶ್ವನಾಥ ಸ್ವಾಮಿಯ ಮೋಕ್ಷ ಕಲ್ಯಾಣ

ತೀರ್ಥಂಕರರ ಪರಂಪರೆಯಲ್ಲಿ 23ನೆಯವರಾದ ಭ| ಪಾರ್ಶ್ವನಾಥ ಸ್ವಾಮಿ ಮೋಕ್ಷ ಪಡೆದ ದಿನ, 2780ನೇ ನಿರ್ವಾಣ ಮಹೋತ್ಸವ (ಮೋಕ್ಷ ಕಲ್ಯಾಣ) ಮೂಡುಬಿದಿರೆ ಗುರುಗಳ ಬಸದಿ ಹಾಗೂ ಶ್ರೀ ದಿಗಂಬರ ಜೈನ ಮಠದಲ್ಲಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ವರ್ಯ ಸ್ವಾಮೀಜಿಯವರ ಉಪಸ್ಥಿತಿಯಲ್ಲಿನಡೆಯಿತು.

ಗುರುಬಸದಿಯಲ್ಲಿ ಬೆಳಗ್ಗೆ 6.35ಕ್ಕೆ 12 ಅಡಿಯ ಚಂಡೋಘ್ರ ಪಾರ್ಶ್ವನಾಥ ಮೂರ್ತಿ ಜಲ, ಎಳನೀರು, ಕ್ಷೀರ, ಅಷ್ಟಗಂಧ ಸಹಿತ ಮಸ್ತಕಾಭಿಷೇಕ, ಸರ್ವಮಂಗಳ ಸದಸ್ಯೆಯರು, ಶ್ರಾವಿಕೆಯರು ಅಷ್ಟ ವಿಧಾರ್ಚನೆ ಸಹಿತ ಮಹಾ ಅರ್ಘ್ಯ ಎತ್ತಿ ಅರಹಂತ, ಸಿದ್ಧ ಜಿನೇಂದ್ರ ಪೂಜೆ ಸಲ್ಲಿಸಿ, ಜಪದೊಂದಿಗೆ ಮಹಾ ಮಂಗಳ ಆರತಿ ಸ್ವಾಮೀಜಿ ಮಂಗಲ ಆಶೀರ್ವಚನ ವಿತ್ತು ಪಾರ್ಶ್ವನಾಥ ಸ್ವಾಮಿಯ ಗುಣ ವಿಶೇಷ ತಿಳಿಸಿದರು. ಭಾರತೀಯ ಅಂಚೆ ಇಲಾಖೆಯ ಅಸ್ಸಾಮ್‌ ನಿರ್ದೇಶಕ ಅಭಿಷೇಕ್‌ ಜೈನ್‌ ದಂಪತಿಯನ್ನು ಸ್ವಾಮೀಜಿ ಪುರಸ್ಕರಿಸಿ ಹರಸಿದರು. ಮಾಜಿ ಸಚಿವ ಕೆ. ಅಭಯಚಂದ್ರ ಸಹಿತ ಸ್ಥಳೀಯರು, ಮಹಾರಾಷ್ಟ್ರ ಮಧ್ಯಪ್ರದೇಶ, ಅಸ್ಸಾಂನ ಶ್ರಾವಕ, ಶ್ರಾವಿಕೆಯರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!