ತೀರ್ಥಂಕರರ ಪರಂಪರೆಯಲ್ಲಿ 23ನೆಯವರಾದ ಭ| ಪಾರ್ಶ್ವನಾಥ ಸ್ವಾಮಿ ಮೋಕ್ಷ ಪಡೆದ ದಿನ, 2780ನೇ ನಿರ್ವಾಣ ಮಹೋತ್ಸವ (ಮೋಕ್ಷ ಕಲ್ಯಾಣ) ಮೂಡುಬಿದಿರೆ ಗುರುಗಳ ಬಸದಿ ಹಾಗೂ ಶ್ರೀ ದಿಗಂಬರ ಜೈನ ಮಠದಲ್ಲಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ವರ್ಯ ಸ್ವಾಮೀಜಿಯವರ ಉಪಸ್ಥಿತಿಯಲ್ಲಿನಡೆಯಿತು.
ಗುರುಬಸದಿಯಲ್ಲಿ ಬೆಳಗ್ಗೆ 6.35ಕ್ಕೆ 12 ಅಡಿಯ ಚಂಡೋಘ್ರ ಪಾರ್ಶ್ವನಾಥ ಮೂರ್ತಿ ಜಲ, ಎಳನೀರು, ಕ್ಷೀರ, ಅಷ್ಟಗಂಧ ಸಹಿತ ಮಸ್ತಕಾಭಿಷೇಕ, ಸರ್ವಮಂಗಳ ಸದಸ್ಯೆಯರು, ಶ್ರಾವಿಕೆಯರು ಅಷ್ಟ ವಿಧಾರ್ಚನೆ ಸಹಿತ ಮಹಾ ಅರ್ಘ್ಯ ಎತ್ತಿ ಅರಹಂತ, ಸಿದ್ಧ ಜಿನೇಂದ್ರ ಪೂಜೆ ಸಲ್ಲಿಸಿ, ಜಪದೊಂದಿಗೆ ಮಹಾ ಮಂಗಳ ಆರತಿ ಸ್ವಾಮೀಜಿ ಮಂಗಲ ಆಶೀರ್ವಚನ ವಿತ್ತು ಪಾರ್ಶ್ವನಾಥ ಸ್ವಾಮಿಯ ಗುಣ ವಿಶೇಷ ತಿಳಿಸಿದರು. ಭಾರತೀಯ ಅಂಚೆ ಇಲಾಖೆಯ ಅಸ್ಸಾಮ್ ನಿರ್ದೇಶಕ ಅಭಿಷೇಕ್ ಜೈನ್ ದಂಪತಿಯನ್ನು ಸ್ವಾಮೀಜಿ ಪುರಸ್ಕರಿಸಿ ಹರಸಿದರು. ಮಾಜಿ ಸಚಿವ ಕೆ. ಅಭಯಚಂದ್ರ ಸಹಿತ ಸ್ಥಳೀಯರು, ಮಹಾರಾಷ್ಟ್ರ ಮಧ್ಯಪ್ರದೇಶ, ಅಸ್ಸಾಂನ ಶ್ರಾವಕ, ಶ್ರಾವಿಕೆಯರು ಪಾಲ್ಗೊಂಡಿದ್ದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…