ತೀರ್ಥಂಕರರ ಪರಂಪರೆಯಲ್ಲಿ 23ನೆಯವರಾದ ಭ| ಪಾರ್ಶ್ವನಾಥ ಸ್ವಾಮಿ ಮೋಕ್ಷ ಪಡೆದ ದಿನ, 2780ನೇ ನಿರ್ವಾಣ ಮಹೋತ್ಸವ (ಮೋಕ್ಷ ಕಲ್ಯಾಣ) ಮೂಡುಬಿದಿರೆ ಗುರುಗಳ ಬಸದಿ ಹಾಗೂ ಶ್ರೀ ದಿಗಂಬರ ಜೈನ ಮಠದಲ್ಲಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ವರ್ಯ ಸ್ವಾಮೀಜಿಯವರ ಉಪಸ್ಥಿತಿಯಲ್ಲಿನಡೆಯಿತು.
ಗುರುಬಸದಿಯಲ್ಲಿ ಬೆಳಗ್ಗೆ 6.35ಕ್ಕೆ 12 ಅಡಿಯ ಚಂಡೋಘ್ರ ಪಾರ್ಶ್ವನಾಥ ಮೂರ್ತಿ ಜಲ, ಎಳನೀರು, ಕ್ಷೀರ, ಅಷ್ಟಗಂಧ ಸಹಿತ ಮಸ್ತಕಾಭಿಷೇಕ, ಸರ್ವಮಂಗಳ ಸದಸ್ಯೆಯರು, ಶ್ರಾವಿಕೆಯರು ಅಷ್ಟ ವಿಧಾರ್ಚನೆ ಸಹಿತ ಮಹಾ ಅರ್ಘ್ಯ ಎತ್ತಿ ಅರಹಂತ, ಸಿದ್ಧ ಜಿನೇಂದ್ರ ಪೂಜೆ ಸಲ್ಲಿಸಿ, ಜಪದೊಂದಿಗೆ ಮಹಾ ಮಂಗಳ ಆರತಿ ಸ್ವಾಮೀಜಿ ಮಂಗಲ ಆಶೀರ್ವಚನ ವಿತ್ತು ಪಾರ್ಶ್ವನಾಥ ಸ್ವಾಮಿಯ ಗುಣ ವಿಶೇಷ ತಿಳಿಸಿದರು. ಭಾರತೀಯ ಅಂಚೆ ಇಲಾಖೆಯ ಅಸ್ಸಾಮ್ ನಿರ್ದೇಶಕ ಅಭಿಷೇಕ್ ಜೈನ್ ದಂಪತಿಯನ್ನು ಸ್ವಾಮೀಜಿ ಪುರಸ್ಕರಿಸಿ ಹರಸಿದರು. ಮಾಜಿ ಸಚಿವ ಕೆ. ಅಭಯಚಂದ್ರ ಸಹಿತ ಸ್ಥಳೀಯರು, ಮಹಾರಾಷ್ಟ್ರ ಮಧ್ಯಪ್ರದೇಶ, ಅಸ್ಸಾಂನ ಶ್ರಾವಕ, ಶ್ರಾವಿಕೆಯರು ಪಾಲ್ಗೊಂಡಿದ್ದರು.
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…