ತೀರ್ಥಂಕರರ ಪರಂಪರೆಯಲ್ಲಿ 23ನೆಯವರಾದ ಭ| ಪಾರ್ಶ್ವನಾಥ ಸ್ವಾಮಿ ಮೋಕ್ಷ ಪಡೆದ ದಿನ, 2780ನೇ ನಿರ್ವಾಣ ಮಹೋತ್ಸವ (ಮೋಕ್ಷ ಕಲ್ಯಾಣ) ಮೂಡುಬಿದಿರೆ ಗುರುಗಳ ಬಸದಿ ಹಾಗೂ ಶ್ರೀ ದಿಗಂಬರ ಜೈನ ಮಠದಲ್ಲಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ವರ್ಯ ಸ್ವಾಮೀಜಿಯವರ ಉಪಸ್ಥಿತಿಯಲ್ಲಿನಡೆಯಿತು.
ಗುರುಬಸದಿಯಲ್ಲಿ ಬೆಳಗ್ಗೆ 6.35ಕ್ಕೆ 12 ಅಡಿಯ ಚಂಡೋಘ್ರ ಪಾರ್ಶ್ವನಾಥ ಮೂರ್ತಿ ಜಲ, ಎಳನೀರು, ಕ್ಷೀರ, ಅಷ್ಟಗಂಧ ಸಹಿತ ಮಸ್ತಕಾಭಿಷೇಕ, ಸರ್ವಮಂಗಳ ಸದಸ್ಯೆಯರು, ಶ್ರಾವಿಕೆಯರು ಅಷ್ಟ ವಿಧಾರ್ಚನೆ ಸಹಿತ ಮಹಾ ಅರ್ಘ್ಯ ಎತ್ತಿ ಅರಹಂತ, ಸಿದ್ಧ ಜಿನೇಂದ್ರ ಪೂಜೆ ಸಲ್ಲಿಸಿ, ಜಪದೊಂದಿಗೆ ಮಹಾ ಮಂಗಳ ಆರತಿ ಸ್ವಾಮೀಜಿ ಮಂಗಲ ಆಶೀರ್ವಚನ ವಿತ್ತು ಪಾರ್ಶ್ವನಾಥ ಸ್ವಾಮಿಯ ಗುಣ ವಿಶೇಷ ತಿಳಿಸಿದರು. ಭಾರತೀಯ ಅಂಚೆ ಇಲಾಖೆಯ ಅಸ್ಸಾಮ್ ನಿರ್ದೇಶಕ ಅಭಿಷೇಕ್ ಜೈನ್ ದಂಪತಿಯನ್ನು ಸ್ವಾಮೀಜಿ ಪುರಸ್ಕರಿಸಿ ಹರಸಿದರು. ಮಾಜಿ ಸಚಿವ ಕೆ. ಅಭಯಚಂದ್ರ ಸಹಿತ ಸ್ಥಳೀಯರು, ಮಹಾರಾಷ್ಟ್ರ ಮಧ್ಯಪ್ರದೇಶ, ಅಸ್ಸಾಂನ ಶ್ರಾವಕ, ಶ್ರಾವಿಕೆಯರು ಪಾಲ್ಗೊಂಡಿದ್ದರು.
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…
ಬೆಂಗಳೂರಿನ ಖ್ಯಾತ ಚಲನಚಿತ್ರ ನಟಿಯಾಗಿರುವ ಬಿಂದ್ಯರಾಮ್ (ರಚಿತರಾಮ್) ಅವರು ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ್ದಾರೆ. ಬೆಂಜನಪದವಿನ…
ದಕ್ಷಿಣ ಕನ್ನಡ ಜಿಲ್ಲೆಯ ನಿನ್ನೆ ಸುರಿದ ಧಾರಾಕಾರ ಮಳೆಯ ಪರಿಣಾಮ ಬಂಟ್ವಾಳ ತಾಲೂಕಿನ ಹಲವು ಭಾಗಗಳಲ್ಲಿ ಸಿಡಿಲು ಬಡಿದು ಅಪಾರ…
ದಕ್ಷಿಣ ಕನ್ನಡ ಜಿಲ್ಲೆಯ ಇತರ ಭಾಗಗಳಂತೆ ಬಂಟ್ವಾಳ ತಾಲೂಕಿನ ಕೆಲ ಭಾಗಗಳಲ್ಲಿ ಎರಡು ದಿನಗಳಿಂದ ಆಗಾಗ್ಗೆ ಮಳೆ ಸುರಿಯುತ್ತಿದ್ದು, ಶನಿವಾರ…
ಸಿಡಿಲು ಬಡಿದು ದೇವಾಲಯದ ಅರ್ಚಕರೊಬ್ಬರು ಮೃತಪಟ್ಟ ಘಟನೆ ಹಾಸನ ತಾಲೂಕಿನ ಕಟ್ಟಾಯ ಹೋಬಳಿಯ ಚನ್ನಂಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರು ಗ್ರಾಮದ…
ಮಂಗಳೂರಿನ ಯೆಯ್ಯಾಡಿ ಗುಂಡಳಿಕೆ ನಿವಾಸಿ 35ರ ಹರೆಯದ ಪ್ರಜ್ವಲ್ ಪೂಜಾರಿ ಅವರು ಹೃ*ದಯಾಘಾತದಿಂದ ನಿನ್ನೆ ರಾತ್ರಿ ವಿಧಿವಶರಾಗಿದ್ದಾರೆ. ಹಿಂದೂ ಜಾಗರಣ…