ಜನ ಮನದ ನಾಡಿ ಮಿಡಿತ

Advertisement

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ; ಮೂವರ ಬಂಧನ


ಮೂಡುಬಿದಿರೆಯ ರಾಜೀವ ಗಾಂಧಿ ಸಂಕೀರ್ಣದ ಎದುರು ತನ್ನ ಸಹಪಾಠಿ ವಿದ್ಯಾರ್ಥಿನಿ ಜೊತೆ ಅನ್ಯ ಮತೀಯ ವಿದ್ಯಾರ್ಥಿಯೋರ್ವ ಮಾತನಾಡಿದ ಎನ್ನುವ ಕಾರಣಕ್ಕೆ ಆತನ ಮೇಲೆ ಗುಂಪೊಂದು ಹಲ್ಲೆ ನಡೆಸಿದ್ದು, ಈ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿ ಮೂವರ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಸಂಜಯ್, ಅಭಿಲಾಷ್ , ಪ್ರೇಮ್ ಪ್ರಕರಣ ದಾಖಲಾದ ಮೂವರು ಆರೋಪಿಗಳು ಎಂದು ಗುರುತಿಸಲಾಗಿದೆ.

ಮೂಡಬಿದ್ರೆಯ ರಾಜೀವ ಗಾಂಧಿ ಸಂಕೀರ್ಣದ ಎದುರು ಆಗಸ್ಟ್ 22ರಂದು ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಬೆಂಗಳೂರಿಗೆ ಹೋಗಲು ಬಂದಿದ್ದಳು. ಅದೇ ಸಮಯದಲ್ಲಿ ಆಗಮಿಸಿದ್ದ ಕೋಟೆಬಾಗಿಲು ಸಮೀಪದ ವಿದ್ಯಾರ್ಥಿ ಹುಡುಗಿಯೊಂದಿಗೆ ಮಾತನಾಡಿದ್ದಾನೆ. ಇದನ್ನು ನೋಡಿಕೊಂಡಿದ್ದ ಗುಂಪು, ಯುವತಿ ಬಸ್ ಹತ್ತಿದ ಬಳಿಕ ವಿದ್ಯಾರ್ಥಿ ಬಳಿ ಬಂದು ಹಲ್ಲೆ ನಡೆಸಿದೆ. ಈ ಸಂಬಂಧ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ದೂರು ದಾಖಲಾಗಿತ್ತು. ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಬುಧವಾರ ಜಿಲ್ಲಾಧಿಕಾರಿಗಳು ಇಲ್ಲಿನ ತಾಲೂಕು ಕಚೇರಿಗೆ ಭೇಟಿ ನೀಡಿದ್ದು, ಈ ಸಂದರ್ಭ ಮುಸ್ಲಿಂ ಸೆಂಟ್ರಲ್ ಕಮಿಟಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಆರೋಪಿಗಳ ವಿರುದ್ದ ಕಠಿಣ ಕ್ರಮಕ್ಕಾಗಿ ಆಗ್ರಹಿಸಿದೆ.

ಸದ್ಯ ಈ ಪ್ರಕರಣ ರಾಜಕೀಯ ತಿರುವು ಪಡೆದಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ಮುಖಂಡರು ತಾಕತ್ತು ಪ್ರದರ್ಶಿಸಲು ಮುಂದಾದ ಹಾಗೆ ಕಂಡು ಬರ್ತಾ ಇದೆ.

Leave a Reply

Your email address will not be published. Required fields are marked *

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

ಮಂಗಳೂರು: ವಿಶ್ವ ಸೈಕಲ್ ದಿನಾಚರಣೆ-2026ರ ಅಂಗವಾಗಿ ‘ಸಂಡೇಸ್ ಆನ್ ಸೈಕಲ್’ ಸೈಕಲ್ ಜಾಥಾ ಆಯೋಜನೆ..!

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

error: Content is protected !!