ಜನ ಮನದ ನಾಡಿ ಮಿಡಿತ

Advertisement

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ; ಮೂವರ ಬಂಧನ


ಮೂಡುಬಿದಿರೆಯ ರಾಜೀವ ಗಾಂಧಿ ಸಂಕೀರ್ಣದ ಎದುರು ತನ್ನ ಸಹಪಾಠಿ ವಿದ್ಯಾರ್ಥಿನಿ ಜೊತೆ ಅನ್ಯ ಮತೀಯ ವಿದ್ಯಾರ್ಥಿಯೋರ್ವ ಮಾತನಾಡಿದ ಎನ್ನುವ ಕಾರಣಕ್ಕೆ ಆತನ ಮೇಲೆ ಗುಂಪೊಂದು ಹಲ್ಲೆ ನಡೆಸಿದ್ದು, ಈ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿ ಮೂವರ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಸಂಜಯ್, ಅಭಿಲಾಷ್ , ಪ್ರೇಮ್ ಪ್ರಕರಣ ದಾಖಲಾದ ಮೂವರು ಆರೋಪಿಗಳು ಎಂದು ಗುರುತಿಸಲಾಗಿದೆ.

ಮೂಡಬಿದ್ರೆಯ ರಾಜೀವ ಗಾಂಧಿ ಸಂಕೀರ್ಣದ ಎದುರು ಆಗಸ್ಟ್ 22ರಂದು ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಬೆಂಗಳೂರಿಗೆ ಹೋಗಲು ಬಂದಿದ್ದಳು. ಅದೇ ಸಮಯದಲ್ಲಿ ಆಗಮಿಸಿದ್ದ ಕೋಟೆಬಾಗಿಲು ಸಮೀಪದ ವಿದ್ಯಾರ್ಥಿ ಹುಡುಗಿಯೊಂದಿಗೆ ಮಾತನಾಡಿದ್ದಾನೆ. ಇದನ್ನು ನೋಡಿಕೊಂಡಿದ್ದ ಗುಂಪು, ಯುವತಿ ಬಸ್ ಹತ್ತಿದ ಬಳಿಕ ವಿದ್ಯಾರ್ಥಿ ಬಳಿ ಬಂದು ಹಲ್ಲೆ ನಡೆಸಿದೆ. ಈ ಸಂಬಂಧ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ದೂರು ದಾಖಲಾಗಿತ್ತು. ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಬುಧವಾರ ಜಿಲ್ಲಾಧಿಕಾರಿಗಳು ಇಲ್ಲಿನ ತಾಲೂಕು ಕಚೇರಿಗೆ ಭೇಟಿ ನೀಡಿದ್ದು, ಈ ಸಂದರ್ಭ ಮುಸ್ಲಿಂ ಸೆಂಟ್ರಲ್ ಕಮಿಟಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಆರೋಪಿಗಳ ವಿರುದ್ದ ಕಠಿಣ ಕ್ರಮಕ್ಕಾಗಿ ಆಗ್ರಹಿಸಿದೆ.

ಸದ್ಯ ಈ ಪ್ರಕರಣ ರಾಜಕೀಯ ತಿರುವು ಪಡೆದಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ಮುಖಂಡರು ತಾಕತ್ತು ಪ್ರದರ್ಶಿಸಲು ಮುಂದಾದ ಹಾಗೆ ಕಂಡು ಬರ್ತಾ ಇದೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!