ಮೂಡುಬಿದಿರೆಯ ರಾಜೀವ ಗಾಂಧಿ ಸಂಕೀರ್ಣದ ಎದುರು ತನ್ನ ಸಹಪಾಠಿ ವಿದ್ಯಾರ್ಥಿನಿ ಜೊತೆ ಅನ್ಯ ಮತೀಯ ವಿದ್ಯಾರ್ಥಿಯೋರ್ವ ಮಾತನಾಡಿದ ಎನ್ನುವ ಕಾರಣಕ್ಕೆ ಆತನ ಮೇಲೆ ಗುಂಪೊಂದು ಹಲ್ಲೆ ನಡೆಸಿದ್ದು, ಈ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿ ಮೂವರ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಸಂಜಯ್, ಅಭಿಲಾಷ್ , ಪ್ರೇಮ್ ಪ್ರಕರಣ ದಾಖಲಾದ ಮೂವರು ಆರೋಪಿಗಳು ಎಂದು ಗುರುತಿಸಲಾಗಿದೆ.
ಮೂಡಬಿದ್ರೆಯ ರಾಜೀವ ಗಾಂಧಿ ಸಂಕೀರ್ಣದ ಎದುರು ಆಗಸ್ಟ್ 22ರಂದು ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಬೆಂಗಳೂರಿಗೆ ಹೋಗಲು ಬಂದಿದ್ದಳು. ಅದೇ ಸಮಯದಲ್ಲಿ ಆಗಮಿಸಿದ್ದ ಕೋಟೆಬಾಗಿಲು ಸಮೀಪದ ವಿದ್ಯಾರ್ಥಿ ಹುಡುಗಿಯೊಂದಿಗೆ ಮಾತನಾಡಿದ್ದಾನೆ. ಇದನ್ನು ನೋಡಿಕೊಂಡಿದ್ದ ಗುಂಪು, ಯುವತಿ ಬಸ್ ಹತ್ತಿದ ಬಳಿಕ ವಿದ್ಯಾರ್ಥಿ ಬಳಿ ಬಂದು ಹಲ್ಲೆ ನಡೆಸಿದೆ. ಈ ಸಂಬಂಧ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ದೂರು ದಾಖಲಾಗಿತ್ತು. ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಬುಧವಾರ ಜಿಲ್ಲಾಧಿಕಾರಿಗಳು ಇಲ್ಲಿನ ತಾಲೂಕು ಕಚೇರಿಗೆ ಭೇಟಿ ನೀಡಿದ್ದು, ಈ ಸಂದರ್ಭ ಮುಸ್ಲಿಂ ಸೆಂಟ್ರಲ್ ಕಮಿಟಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಆರೋಪಿಗಳ ವಿರುದ್ದ ಕಠಿಣ ಕ್ರಮಕ್ಕಾಗಿ ಆಗ್ರಹಿಸಿದೆ.
ಸದ್ಯ ಈ ಪ್ರಕರಣ ರಾಜಕೀಯ ತಿರುವು ಪಡೆದಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ಮುಖಂಡರು ತಾಕತ್ತು ಪ್ರದರ್ಶಿಸಲು ಮುಂದಾದ ಹಾಗೆ ಕಂಡು ಬರ್ತಾ ಇದೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…