ಮೂಡುಬಿದಿರೆಯ ರಾಜೀವ ಗಾಂಧಿ ಸಂಕೀರ್ಣದ ಎದುರು ತನ್ನ ಸಹಪಾಠಿ ವಿದ್ಯಾರ್ಥಿನಿ ಜೊತೆ ಅನ್ಯ ಮತೀಯ ವಿದ್ಯಾರ್ಥಿಯೋರ್ವ ಮಾತನಾಡಿದ ಎನ್ನುವ ಕಾರಣಕ್ಕೆ ಆತನ ಮೇಲೆ ಗುಂಪೊಂದು ಹಲ್ಲೆ ನಡೆಸಿದ್ದು, ಈ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿ ಮೂವರ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಸಂಜಯ್, ಅಭಿಲಾಷ್ , ಪ್ರೇಮ್ ಪ್ರಕರಣ ದಾಖಲಾದ ಮೂವರು ಆರೋಪಿಗಳು ಎಂದು ಗುರುತಿಸಲಾಗಿದೆ.
ಮೂಡಬಿದ್ರೆಯ ರಾಜೀವ ಗಾಂಧಿ ಸಂಕೀರ್ಣದ ಎದುರು ಆಗಸ್ಟ್ 22ರಂದು ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಬೆಂಗಳೂರಿಗೆ ಹೋಗಲು ಬಂದಿದ್ದಳು. ಅದೇ ಸಮಯದಲ್ಲಿ ಆಗಮಿಸಿದ್ದ ಕೋಟೆಬಾಗಿಲು ಸಮೀಪದ ವಿದ್ಯಾರ್ಥಿ ಹುಡುಗಿಯೊಂದಿಗೆ ಮಾತನಾಡಿದ್ದಾನೆ. ಇದನ್ನು ನೋಡಿಕೊಂಡಿದ್ದ ಗುಂಪು, ಯುವತಿ ಬಸ್ ಹತ್ತಿದ ಬಳಿಕ ವಿದ್ಯಾರ್ಥಿ ಬಳಿ ಬಂದು ಹಲ್ಲೆ ನಡೆಸಿದೆ. ಈ ಸಂಬಂಧ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ದೂರು ದಾಖಲಾಗಿತ್ತು. ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಬುಧವಾರ ಜಿಲ್ಲಾಧಿಕಾರಿಗಳು ಇಲ್ಲಿನ ತಾಲೂಕು ಕಚೇರಿಗೆ ಭೇಟಿ ನೀಡಿದ್ದು, ಈ ಸಂದರ್ಭ ಮುಸ್ಲಿಂ ಸೆಂಟ್ರಲ್ ಕಮಿಟಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಆರೋಪಿಗಳ ವಿರುದ್ದ ಕಠಿಣ ಕ್ರಮಕ್ಕಾಗಿ ಆಗ್ರಹಿಸಿದೆ.
ಸದ್ಯ ಈ ಪ್ರಕರಣ ರಾಜಕೀಯ ತಿರುವು ಪಡೆದಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ಮುಖಂಡರು ತಾಕತ್ತು ಪ್ರದರ್ಶಿಸಲು ಮುಂದಾದ ಹಾಗೆ ಕಂಡು ಬರ್ತಾ ಇದೆ.
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕರ ಕುಂದು-ಕೊರತೆ…
ಸ್ವಚ್ಛತೆಯ ಬಗ್ಗೆ ತಿಳಿ ಹೇಳಬೇಕಾದ ಸರಕಾರಿ ಕಚೇರಿಯ ಮುಂಭಾಗದಲ್ಲಿ ರಾಶಿ ಹಾಕಲಾದ ಕಸದ ಬಗ್ಗೆ ಸಾರ್ವಜನಿಕರು ಮಾತನಾಡುವಂತಾಗಿದೆ. ಬಿಸಿರೋಡಿನ ಪುರಸಭಾ…
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…