2025ಕ್ಕೆ ಮಾನವ ಸಹಿತ ಗಗನಯಾನ ಸಾಧ್ಯವಾಗಲಿದೆ ಎಂದು ಇಸ್ರೋ ಮುಖ್ಯಸ್ಥ ಸೋಮನಾಥ್ ತಿಳಿಸಿದ್ದಾರೆ.
ಚಂದ್ರಯಾನ-3 ಯಶಸ್ಸಿನ ಬೆನ್ನಲ್ಲೇ ಮಾತನಾಡಿರುವ ಅವರು, ಚಂದ್ರನ ಅಂಗಳದಲ್ಲಿ ಇಳಿದಿರುವ ರೋವರ್ ಪ್ರಜ್ಞಾನ್ನಲ್ಲಿ ರಸಾಯನಿಕ ಸಂಯೋಜನೆ ಅಧ್ಯಯನಕ್ಕೆ ಸಂಬಂಧಿಸಿದ ಎರಡು ಉಪಕರಣಗಳಿವೆ. ಚಂದ್ರನ ಮೇಲ್ಮೈ ಮೇಲೆ ರಸಾಯನಿಕ ಸಂಯೋಜನೆ ಬಗ್ಗೆ ಅಧ್ಯಯನ ಮಾಡಲಿದೆ. ಚಂದ್ರನ ಮೇಲ್ಮೈ ಮೇಲೆ ರೋವರ್ ಸಂಚಾರ ನಡೆಯಲಿದೆ. ಸೂರ್ಯನ ಅಧ್ಯಯನಕ್ಕಾಗಿ ಆದಿತ್ಯ ಮಿಷನ್ ಸೆಪ್ಟೆಂಬರ್ನಲ್ಲಿ ಉಡಾವಣೆ ಆಗಲಿದೆ. ಗಗನಯಾನದ ಕೆಲಸ ಇನ್ನೂ ನಡೆಯುತ್ತಿದೆ. ಮಾನವ ಸಹಿತ ಗಗನಯಾನ 2025 ಕ್ಕೆ ಸಾಧ್ಯವಾಗಲಿದೆ ಎಂದರು.
ಇನ್ನು ಚಂದ್ರಯಾನ-3 ಬಗ್ಗೆ ಮಾತನಾಡಿ, ನಾವು ಚಂದ್ರನ ದಕ್ಷಿಣ ದ್ರುವದ ಹತ್ತಿರಕ್ಕೆ ಹೋಗಿದ್ದೇವೆ. ದಕ್ಷಿಣ ಧ್ರುವ ಬಹುತೇಕ 70 ಡಿಗ್ರಿಯಲ್ಲಿದೆ. ದಕ್ಷಿಣ ಧ್ರುವದಲ್ಲಿ ಕೆಲವೊಂದು ಅನುಕೂಲಗಳಿವೆ. ಸೂರ್ಯನ ಬೆಳಕು ಕಡಿಮೆ ಬೀಳುತ್ತದೆ. ದಕ್ಷಿಣ ಧ್ರುವದಲ್ಲಿ ಹೆಚ್ಚಿನ ವೈಜ್ಞಾನಿಕ ಅಧ್ಯಯನದ ಅಂಶಗಳಿವೆ. ಚಂದ್ರನ ಬಗ್ಗೆ ಅಧ್ಯಯನ ಮಾಡುವ ವಿಜ್ಞಾನಿಗಳು ದಕ್ಷಿಣ ಧ್ರುವದ ಬಗ್ಗೆ ಹೆಚ್ಚಿನ ಆಸಕ್ತಿ ತೋರಿಸಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…