2025ಕ್ಕೆ ಮಾನವ ಸಹಿತ ಗಗನಯಾನ ಸಾಧ್ಯವಾಗಲಿದೆ ಎಂದು ಇಸ್ರೋ ಮುಖ್ಯಸ್ಥ ಸೋಮನಾಥ್ ತಿಳಿಸಿದ್ದಾರೆ.
ಚಂದ್ರಯಾನ-3 ಯಶಸ್ಸಿನ ಬೆನ್ನಲ್ಲೇ ಮಾತನಾಡಿರುವ ಅವರು, ಚಂದ್ರನ ಅಂಗಳದಲ್ಲಿ ಇಳಿದಿರುವ ರೋವರ್ ಪ್ರಜ್ಞಾನ್ನಲ್ಲಿ ರಸಾಯನಿಕ ಸಂಯೋಜನೆ ಅಧ್ಯಯನಕ್ಕೆ ಸಂಬಂಧಿಸಿದ ಎರಡು ಉಪಕರಣಗಳಿವೆ. ಚಂದ್ರನ ಮೇಲ್ಮೈ ಮೇಲೆ ರಸಾಯನಿಕ ಸಂಯೋಜನೆ ಬಗ್ಗೆ ಅಧ್ಯಯನ ಮಾಡಲಿದೆ. ಚಂದ್ರನ ಮೇಲ್ಮೈ ಮೇಲೆ ರೋವರ್ ಸಂಚಾರ ನಡೆಯಲಿದೆ. ಸೂರ್ಯನ ಅಧ್ಯಯನಕ್ಕಾಗಿ ಆದಿತ್ಯ ಮಿಷನ್ ಸೆಪ್ಟೆಂಬರ್ನಲ್ಲಿ ಉಡಾವಣೆ ಆಗಲಿದೆ. ಗಗನಯಾನದ ಕೆಲಸ ಇನ್ನೂ ನಡೆಯುತ್ತಿದೆ. ಮಾನವ ಸಹಿತ ಗಗನಯಾನ 2025 ಕ್ಕೆ ಸಾಧ್ಯವಾಗಲಿದೆ ಎಂದರು.
ಇನ್ನು ಚಂದ್ರಯಾನ-3 ಬಗ್ಗೆ ಮಾತನಾಡಿ, ನಾವು ಚಂದ್ರನ ದಕ್ಷಿಣ ದ್ರುವದ ಹತ್ತಿರಕ್ಕೆ ಹೋಗಿದ್ದೇವೆ. ದಕ್ಷಿಣ ಧ್ರುವ ಬಹುತೇಕ 70 ಡಿಗ್ರಿಯಲ್ಲಿದೆ. ದಕ್ಷಿಣ ಧ್ರುವದಲ್ಲಿ ಕೆಲವೊಂದು ಅನುಕೂಲಗಳಿವೆ. ಸೂರ್ಯನ ಬೆಳಕು ಕಡಿಮೆ ಬೀಳುತ್ತದೆ. ದಕ್ಷಿಣ ಧ್ರುವದಲ್ಲಿ ಹೆಚ್ಚಿನ ವೈಜ್ಞಾನಿಕ ಅಧ್ಯಯನದ ಅಂಶಗಳಿವೆ. ಚಂದ್ರನ ಬಗ್ಗೆ ಅಧ್ಯಯನ ಮಾಡುವ ವಿಜ್ಞಾನಿಗಳು ದಕ್ಷಿಣ ಧ್ರುವದ ಬಗ್ಗೆ ಹೆಚ್ಚಿನ ಆಸಕ್ತಿ ತೋರಿಸಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…