ರಾಯಿ ಗ್ರಾಮ ಪಂಚಾಯತ್ ನಲ್ಲಿ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ನಡೆದು ಒಂದು ವಾರದಲ್ಲೇ ಬಿಜೆಪಿ ಭಿನ್ನಮತ ಸ್ಪೋಟಗೊಂಡಿದೆ.ಈ ಗ್ರಾ.ಪಂ.ವ್ಯಾಪ್ತಿಯ ಕೊಯಿಲ ಒಂದನೇ ವಾರ್ಡ್ ಬಿಜೆಪಿ ಬೆಂಬಲಿತ ಸದಸ್ಯೆ ಪುಷ್ಪಾವತಿ ಪೂಜಾರಿ ರಾಜೀನಾಮೆ ಸಲ್ಲಿಸಿದ್ದಾರೆ.
ಅವರು ಕೊಯಿಲ ಒಂದನೇ ವಾರ್ಡಿನ ಬೂತ್ ಸಂಖ್ಯೆ 27 ರಲ್ಲಿ ಬಿಜೆಪಿ ಬೆಂಬಲಿತ ಚುನಾಯಿತ ಸದಸ್ಯೆಯಾಗಿದ್ದು, ಅವರ ವಾರ್ಡಿನಲ್ಲಿ ಗ್ರಾ.ಪಂ.ಅಧ್ಯಕ್ಷರು ಮತ್ತು ಪಕ್ಷದ ಮುಖಂಡರು ಅನಗತ್ಯವಾಗಿ ಹಸ್ತಕ್ಷೇಪ ನಡೆಸುತ್ತಿದ್ದಾರೆ.ಅದಲ್ಲದೇ ವಾರ್ಡಿನಲ್ಲಿ ಸರ್ಕಾರದ ಅನುದಾನದಿಂದ ರಸ್ತೆ ಅಭಿವೃದ್ಧಿ ಮತ್ತು ರಿಪೇರಿ ಮುಂತಾದ ಕಾಮಗಾರಿಗಳನ್ನು ವಾ ಸದಸ್ಯೆ ಗಮನಕ್ಕೆ ತಾರದೆ ನಡೆಸುತ್ತಿದ್ದು, ಇದರಿಂದ ಪುಷ್ಪವತಿಯವರಿಗೆ ಅವಮಾನವಾಗಿದೆ.
ಇದರಿಂದಾಗಿ ಗ್ರಾಮ ಪಂಚಾಯತ್ ಸದಸ್ಯ ಸ್ಥಾನ ಮತ್ತು ಪಕ್ಷಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ. ಗ್ರಾ.ಪಂ. ಅಧ್ಯಕ್ಷರು ಮತ್ತು ಪಿಡಿಒ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದು, ಶಾಸಕರು ಮತ್ತು ತಾ.ಪಂ.ಕಾರ್ಯನಿರ್ವಹಣಾಧಿಕಾರಿಗೂ ರಾಜೀನಾಮೆ ಇದೀಗ ಈ ರಾಜೀನಾಮೆ ಪತ್ರ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗ್ತಾ ಇದೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…