ಜನ ಮನದ ನಾಡಿ ಮಿಡಿತ

Advertisement

ರಕ್ಕಸ ಕಾಮಾಂಧರ ವಿರುದ್ಧ ಗುಡುಗಿದ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ

ಇವತ್ತು ಪ್ರಜೆಗಳು ಒಂದಾಗಿ, ಸತ್ಯ, ಧರ್ಮ, ನ್ಯಾಯಕ್ಕಾಗಿ ಹೋರಾಟವನ್ನು ಮಾಡುವ ಅವಶ್ಯಕತೆಯಿದೆ. ಆಗ ಮಾತ್ರ ರಕ್ಕಸ ಕಾಮಂಧರಿಗೆ ಶಿಕ್ಷಯಾಗುತ್ತದೆ ಎಂದು ಹಿಂದು ಹೋರಾಟಗಾರ ಮಹೇಶ್ ತಿಮರೋಡಿ ಗುಡುಗಿದ್ದಾರೆ. ಇವರು ಸೌಜನ್ಯ ಪರವಾಗಿ ಮೂಲ್ಕಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತಾನಾಡಿ, ಪ್ರಜೆಗಳ ತೆರಿಗೆಯನ್ನು ನೀಚ ಕೃತ್ಯ ಎಸಗಿದವರ ರಕ್ಷಣೆಗಾಗಿ ಖರ್ಚು ಮಾಡುತ್ತಿದ್ದಾರೆ.

ಇಂತಹ ಪಾಪಿಗಳಿಗೆ ಸರ್ವಶಕ್ತ ಆ ದೇವರು ಶಾಪವನ್ನು ನೀಡಲಿ ಎಂದು ಅಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ ಸೌಜನ್ಯ ತಾಯಿ ಕುಸುಮಾವತಿ ಮಾತಾನಾಡಿ, ಸೌಜನ್ಯಳಿಗೆ ನಾವು ಒಂದು ಪೆಟ್ಟು ಕೊಟ್ಟವರಲ್ಲ, ಅಷ್ಟೂ ಮುದ್ದಾಗಿ ಬೆಳೆಸಿದ ಮಗಳನ್ನ ನೀಚ ರಕ್ಕಸರು ಕ್ರೂರವಾಗಿ ಸಾಯಿಸಿದ್ರು. ತಮ್ಮ ಮಗಳನ್ನ ನೆನೆದು ಸೌಜನ್ಯ ತಾಯಿ ಕಣ್ಣಿರಿಟ್ಟಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ನಗರ ಪಂಚಾಯತ್ ಅಧ್ಯಕ್ಷ ಸುಭಾಷ್ ಶೆಟ್ಟಿ, ಮೂಲ್ಕಿ ಮಸೀದಿ ಧರ್ಮಗುರು ಮತ್ತಿತರರು ಉಪಸ್ಥಿತರಿದ್ದರು. ಮಹೇಶ್ ಶೆಟ್ಟಿ ತಿಮರೋಡಿ, ಸೌಜನ್ಯ ತಾಯಿ ಕುಸುಮಾವತಿ ಸಹಿತ ಇತರರು ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!