ಇವತ್ತು ಪ್ರಜೆಗಳು ಒಂದಾಗಿ, ಸತ್ಯ, ಧರ್ಮ, ನ್ಯಾಯಕ್ಕಾಗಿ ಹೋರಾಟವನ್ನು ಮಾಡುವ ಅವಶ್ಯಕತೆಯಿದೆ. ಆಗ ಮಾತ್ರ ರಕ್ಕಸ ಕಾಮಂಧರಿಗೆ ಶಿಕ್ಷಯಾಗುತ್ತದೆ ಎಂದು ಹಿಂದು ಹೋರಾಟಗಾರ ಮಹೇಶ್ ತಿಮರೋಡಿ ಗುಡುಗಿದ್ದಾರೆ. ಇವರು ಸೌಜನ್ಯ ಪರವಾಗಿ ಮೂಲ್ಕಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತಾನಾಡಿ, ಪ್ರಜೆಗಳ ತೆರಿಗೆಯನ್ನು ನೀಚ ಕೃತ್ಯ ಎಸಗಿದವರ ರಕ್ಷಣೆಗಾಗಿ ಖರ್ಚು ಮಾಡುತ್ತಿದ್ದಾರೆ.
ಇಂತಹ ಪಾಪಿಗಳಿಗೆ ಸರ್ವಶಕ್ತ ಆ ದೇವರು ಶಾಪವನ್ನು ನೀಡಲಿ ಎಂದು ಅಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ ಸೌಜನ್ಯ ತಾಯಿ ಕುಸುಮಾವತಿ ಮಾತಾನಾಡಿ, ಸೌಜನ್ಯಳಿಗೆ ನಾವು ಒಂದು ಪೆಟ್ಟು ಕೊಟ್ಟವರಲ್ಲ, ಅಷ್ಟೂ ಮುದ್ದಾಗಿ ಬೆಳೆಸಿದ ಮಗಳನ್ನ ನೀಚ ರಕ್ಕಸರು ಕ್ರೂರವಾಗಿ ಸಾಯಿಸಿದ್ರು. ತಮ್ಮ ಮಗಳನ್ನ ನೆನೆದು ಸೌಜನ್ಯ ತಾಯಿ ಕಣ್ಣಿರಿಟ್ಟಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ನಗರ ಪಂಚಾಯತ್ ಅಧ್ಯಕ್ಷ ಸುಭಾಷ್ ಶೆಟ್ಟಿ, ಮೂಲ್ಕಿ ಮಸೀದಿ ಧರ್ಮಗುರು ಮತ್ತಿತರರು ಉಪಸ್ಥಿತರಿದ್ದರು. ಮಹೇಶ್ ಶೆಟ್ಟಿ ತಿಮರೋಡಿ, ಸೌಜನ್ಯ ತಾಯಿ ಕುಸುಮಾವತಿ ಸಹಿತ ಇತರರು ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…