ಇವತ್ತು ಪ್ರಜೆಗಳು ಒಂದಾಗಿ, ಸತ್ಯ, ಧರ್ಮ, ನ್ಯಾಯಕ್ಕಾಗಿ ಹೋರಾಟವನ್ನು ಮಾಡುವ ಅವಶ್ಯಕತೆಯಿದೆ. ಆಗ ಮಾತ್ರ ರಕ್ಕಸ ಕಾಮಂಧರಿಗೆ ಶಿಕ್ಷಯಾಗುತ್ತದೆ ಎಂದು ಹಿಂದು ಹೋರಾಟಗಾರ ಮಹೇಶ್ ತಿಮರೋಡಿ ಗುಡುಗಿದ್ದಾರೆ. ಇವರು ಸೌಜನ್ಯ ಪರವಾಗಿ ಮೂಲ್ಕಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತಾನಾಡಿ, ಪ್ರಜೆಗಳ ತೆರಿಗೆಯನ್ನು ನೀಚ ಕೃತ್ಯ ಎಸಗಿದವರ ರಕ್ಷಣೆಗಾಗಿ ಖರ್ಚು ಮಾಡುತ್ತಿದ್ದಾರೆ.
ಇಂತಹ ಪಾಪಿಗಳಿಗೆ ಸರ್ವಶಕ್ತ ಆ ದೇವರು ಶಾಪವನ್ನು ನೀಡಲಿ ಎಂದು ಅಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ ಸೌಜನ್ಯ ತಾಯಿ ಕುಸುಮಾವತಿ ಮಾತಾನಾಡಿ, ಸೌಜನ್ಯಳಿಗೆ ನಾವು ಒಂದು ಪೆಟ್ಟು ಕೊಟ್ಟವರಲ್ಲ, ಅಷ್ಟೂ ಮುದ್ದಾಗಿ ಬೆಳೆಸಿದ ಮಗಳನ್ನ ನೀಚ ರಕ್ಕಸರು ಕ್ರೂರವಾಗಿ ಸಾಯಿಸಿದ್ರು. ತಮ್ಮ ಮಗಳನ್ನ ನೆನೆದು ಸೌಜನ್ಯ ತಾಯಿ ಕಣ್ಣಿರಿಟ್ಟಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ನಗರ ಪಂಚಾಯತ್ ಅಧ್ಯಕ್ಷ ಸುಭಾಷ್ ಶೆಟ್ಟಿ, ಮೂಲ್ಕಿ ಮಸೀದಿ ಧರ್ಮಗುರು ಮತ್ತಿತರರು ಉಪಸ್ಥಿತರಿದ್ದರು. ಮಹೇಶ್ ಶೆಟ್ಟಿ ತಿಮರೋಡಿ, ಸೌಜನ್ಯ ತಾಯಿ ಕುಸುಮಾವತಿ ಸಹಿತ ಇತರರು ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಮಿಜಾರ್ ಸಮೀಪ ಬಾಡಿಗೆ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಮೂವರು ಗಾಯಗೊಂಡ ಘಟನೆ ನಡೆದಿದೆ. ಘಟನೆಯಲ್ಲಿ ಆಳ್ವಾಸ್ ಕಾಲೇಜಿನ ಕೆಲಸಗಾರ ಶಿವರಾಮ,…
ನೀಟ್ ಮರು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ಕೋಚಿಂಗ್ ಸೆಂಟರ್ನ ಹಾಸ್ಟೆಲ್ನಲ್ಲಿ ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದ ದುರಂತ ಮಾಸುವ ಮುನ್ನವೇ,…
ಕೊಲಂಬಿಯಾದ ಪಶ್ಚಿಮ ಭಾಗದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 111 ಮಂದಿ ಮೃತಪಟ್ಟಿದ್ದಾರೆ. 87ಕ್ಕೂ ಹೆಚ್ಚು ಮಂದಿ…
ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ವಿಟ್ಲ ಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ…
ಪಾದಚಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತಲಪಾಡಿಯಲ್ಲಿ ನಡೆದಿದೆ. ಗದಗ ನಿವಾಸಿ ಶರಣಪ್ಪ ಗಂಭೀರ…
ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕ…