ಇವತ್ತು ಪ್ರಜೆಗಳು ಒಂದಾಗಿ, ಸತ್ಯ, ಧರ್ಮ, ನ್ಯಾಯಕ್ಕಾಗಿ ಹೋರಾಟವನ್ನು ಮಾಡುವ ಅವಶ್ಯಕತೆಯಿದೆ. ಆಗ ಮಾತ್ರ ರಕ್ಕಸ ಕಾಮಂಧರಿಗೆ ಶಿಕ್ಷಯಾಗುತ್ತದೆ ಎಂದು ಹಿಂದು ಹೋರಾಟಗಾರ ಮಹೇಶ್ ತಿಮರೋಡಿ ಗುಡುಗಿದ್ದಾರೆ. ಇವರು ಸೌಜನ್ಯ ಪರವಾಗಿ ಮೂಲ್ಕಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತಾನಾಡಿ, ಪ್ರಜೆಗಳ ತೆರಿಗೆಯನ್ನು ನೀಚ ಕೃತ್ಯ ಎಸಗಿದವರ ರಕ್ಷಣೆಗಾಗಿ ಖರ್ಚು ಮಾಡುತ್ತಿದ್ದಾರೆ.
ಇಂತಹ ಪಾಪಿಗಳಿಗೆ ಸರ್ವಶಕ್ತ ಆ ದೇವರು ಶಾಪವನ್ನು ನೀಡಲಿ ಎಂದು ಅಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ ಸೌಜನ್ಯ ತಾಯಿ ಕುಸುಮಾವತಿ ಮಾತಾನಾಡಿ, ಸೌಜನ್ಯಳಿಗೆ ನಾವು ಒಂದು ಪೆಟ್ಟು ಕೊಟ್ಟವರಲ್ಲ, ಅಷ್ಟೂ ಮುದ್ದಾಗಿ ಬೆಳೆಸಿದ ಮಗಳನ್ನ ನೀಚ ರಕ್ಕಸರು ಕ್ರೂರವಾಗಿ ಸಾಯಿಸಿದ್ರು. ತಮ್ಮ ಮಗಳನ್ನ ನೆನೆದು ಸೌಜನ್ಯ ತಾಯಿ ಕಣ್ಣಿರಿಟ್ಟಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ನಗರ ಪಂಚಾಯತ್ ಅಧ್ಯಕ್ಷ ಸುಭಾಷ್ ಶೆಟ್ಟಿ, ಮೂಲ್ಕಿ ಮಸೀದಿ ಧರ್ಮಗುರು ಮತ್ತಿತರರು ಉಪಸ್ಥಿತರಿದ್ದರು. ಮಹೇಶ್ ಶೆಟ್ಟಿ ತಿಮರೋಡಿ, ಸೌಜನ್ಯ ತಾಯಿ ಕುಸುಮಾವತಿ ಸಹಿತ ಇತರರು ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…