ದಕ್ಷಿಣ ಕನ್ನಡ : ಬೆಳೆಯುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ತ್ಯಾಜ್ಯ ಸಮಸ್ಯೆ ಮಿತಿಮೀರಿದೆ, ಒಂದೆಡೆ ಮಂಗಳೂರು ಮಹಾನಗರ ಪಾಲಿಕೆ ಶ್ರಮಪಟ್ಟು ತ್ಯಾಜ್ಯ ವಿಲೇವಾರಿಯನ್ನು ಮಾಡುಲು ಪ್ರಯತ್ನಿಸಿರುವಾಗಲೇ ಇದ್ದ ಕೆಲವೊಂದು ನಾಗರಿಕರು ಬೇಜವಾಬ್ದಾರಿಯನ್ನು ಪ್ರದರ್ಶಿಸುತ್ತಿದ್ದಾರೆ. ಅಂತವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಮತ್ತು ದಂಡ ವಿಧಿಸುವುದಾಗಿ ಅಗತ್ಯವಿದ್ದಲ್ಲಿ ಮೊಕದ್ದಮೆ ದಾಖಲಿಸಿಕೊಳ್ಳುವುದಾಗಿ ಅಧಿಕೃತ ಮೂಲಗಳು ತಿಳಿಸಿವೆ.
ಮಂಗಳೂರಿನಲ್ಲಿ ಕಟ್ಟಡ ತ್ಯಾಜ್ಯವನ್ನು ಫುಟ್ಪಾತ್ಗೆ ಎಸೆದ ವ್ಯಕ್ತಿಗೆ ಮಂಗಳೂರು ಪಾಲಿಕೆ ಘನತ್ಯಾಜ್ಯ ನಿರ್ವಹಣೆ ಉಪವಿಧಿ ಉಲ್ಲಂಘನೆ ಪ್ರಕರಣದಡಿ 4,000 ರೂಪಾಯಿ ದಂಡ ವಿಧಿಸಿ, ಮೊತ್ತ ವಸೂಲಿ ಮಾಡಿದೆ. ವ್ಯಕ್ತಿಯೊಬ್ಬರು ತ್ಯಾಜ್ಯವನ್ನು ತಂದು ಫುಟ್ ಪಾತ್ ನಲ್ಲಿ ಸುರಿದಿದ್ದರು. ಇದರ ಬಗ್ಗೆ ಸಾರ್ವಜನಿಕರು ಪಾಲಿಕೆಗೆ ದೂರು ನೀಡಿದ್ದರು. ಪಾಲಿಕೆ ಅಧಿಕಾರಿಗಳು ಸ್ವಚ್ಛತಾ ದರವೆಂದು 4 ಸಾವಿರ ದಂಡ ವಸೂಲು ಮಾಡಿದೆ.ಮಹಾನಗರ ಪಾಲಿಕೆ ವ್ಯಾಪ್ತಿಯೊಳಗೆ ಸಾರ್ವಜನಿಕ ಸ್ಥಳಗಳಲ್ಲಿ, ರಸ್ತೆ ಬದಿಯಲ್ಲಿ ಸಾರ್ವಜನಿಕರು ತ್ಯಾಜ್ಯ ಎಸೆಯುತ್ತಿರುವುದರಿಂದ ನಗರದ ವಿವಿಧ ಸ್ಥಳಗಳಲ್ಲಿ ತ್ಯಾಜ್ಯಗಳ ಬ್ಲ್ಯಾಕ್ ಉಂಟಾಗುತ್ತದೆ.
ಇದರಿಂದ ನಗರದ ಸೌಂದರ್ಯ ಹಾಗೂ ಸ್ವಚ್ಛತೆಗೆ ದಕ್ಕೆಯಾಗುತ್ತಿದೆ.ಈ ರೀತಿಯ ಅನಧಿಕೃತ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಹಾಗೂ ಸೌಂದರ್ಯಕ್ಕೆ ಹಾಗೂ ಸ್ವಚ್ಛತೆಗೆ ದಕ್ಕೆ ತರುವವರ ವಿರುದ್ದ ದಂಡ ವಿಧಿಸಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಉದ್ದೇಶಿಸಲಾಗಿದೆ.ಆದ್ದರಿಂದ ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದಿರುವುದು ಕಂಡು ಬಂದಲ್ಲಿ ಸಂಬಂಧಪಟ್ಟವರ ವಿರುದ್ದ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುತ್ತದೆ. ಈ ಬಗ್ಗೆ ಎಚ್ಚರ ವಹಿಸುವಂತೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…