ದಕ್ಷಿಣ ಕನ್ನಡ : ಬೆಳೆಯುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ತ್ಯಾಜ್ಯ ಸಮಸ್ಯೆ ಮಿತಿಮೀರಿದೆ, ಒಂದೆಡೆ ಮಂಗಳೂರು ಮಹಾನಗರ ಪಾಲಿಕೆ ಶ್ರಮಪಟ್ಟು ತ್ಯಾಜ್ಯ ವಿಲೇವಾರಿಯನ್ನು ಮಾಡುಲು ಪ್ರಯತ್ನಿಸಿರುವಾಗಲೇ ಇದ್ದ ಕೆಲವೊಂದು ನಾಗರಿಕರು ಬೇಜವಾಬ್ದಾರಿಯನ್ನು ಪ್ರದರ್ಶಿಸುತ್ತಿದ್ದಾರೆ. ಅಂತವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಮತ್ತು ದಂಡ ವಿಧಿಸುವುದಾಗಿ ಅಗತ್ಯವಿದ್ದಲ್ಲಿ ಮೊಕದ್ದಮೆ ದಾಖಲಿಸಿಕೊಳ್ಳುವುದಾಗಿ ಅಧಿಕೃತ ಮೂಲಗಳು ತಿಳಿಸಿವೆ.
ಮಂಗಳೂರಿನಲ್ಲಿ ಕಟ್ಟಡ ತ್ಯಾಜ್ಯವನ್ನು ಫುಟ್ಪಾತ್ಗೆ ಎಸೆದ ವ್ಯಕ್ತಿಗೆ ಮಂಗಳೂರು ಪಾಲಿಕೆ ಘನತ್ಯಾಜ್ಯ ನಿರ್ವಹಣೆ ಉಪವಿಧಿ ಉಲ್ಲಂಘನೆ ಪ್ರಕರಣದಡಿ 4,000 ರೂಪಾಯಿ ದಂಡ ವಿಧಿಸಿ, ಮೊತ್ತ ವಸೂಲಿ ಮಾಡಿದೆ. ವ್ಯಕ್ತಿಯೊಬ್ಬರು ತ್ಯಾಜ್ಯವನ್ನು ತಂದು ಫುಟ್ ಪಾತ್ ನಲ್ಲಿ ಸುರಿದಿದ್ದರು. ಇದರ ಬಗ್ಗೆ ಸಾರ್ವಜನಿಕರು ಪಾಲಿಕೆಗೆ ದೂರು ನೀಡಿದ್ದರು. ಪಾಲಿಕೆ ಅಧಿಕಾರಿಗಳು ಸ್ವಚ್ಛತಾ ದರವೆಂದು 4 ಸಾವಿರ ದಂಡ ವಸೂಲು ಮಾಡಿದೆ.ಮಹಾನಗರ ಪಾಲಿಕೆ ವ್ಯಾಪ್ತಿಯೊಳಗೆ ಸಾರ್ವಜನಿಕ ಸ್ಥಳಗಳಲ್ಲಿ, ರಸ್ತೆ ಬದಿಯಲ್ಲಿ ಸಾರ್ವಜನಿಕರು ತ್ಯಾಜ್ಯ ಎಸೆಯುತ್ತಿರುವುದರಿಂದ ನಗರದ ವಿವಿಧ ಸ್ಥಳಗಳಲ್ಲಿ ತ್ಯಾಜ್ಯಗಳ ಬ್ಲ್ಯಾಕ್ ಉಂಟಾಗುತ್ತದೆ.
ಇದರಿಂದ ನಗರದ ಸೌಂದರ್ಯ ಹಾಗೂ ಸ್ವಚ್ಛತೆಗೆ ದಕ್ಕೆಯಾಗುತ್ತಿದೆ.ಈ ರೀತಿಯ ಅನಧಿಕೃತ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಹಾಗೂ ಸೌಂದರ್ಯಕ್ಕೆ ಹಾಗೂ ಸ್ವಚ್ಛತೆಗೆ ದಕ್ಕೆ ತರುವವರ ವಿರುದ್ದ ದಂಡ ವಿಧಿಸಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಉದ್ದೇಶಿಸಲಾಗಿದೆ.ಆದ್ದರಿಂದ ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದಿರುವುದು ಕಂಡು ಬಂದಲ್ಲಿ ಸಂಬಂಧಪಟ್ಟವರ ವಿರುದ್ದ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುತ್ತದೆ. ಈ ಬಗ್ಗೆ ಎಚ್ಚರ ವಹಿಸುವಂತೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…