ಜನ ಮನದ ನಾಡಿ ಮಿಡಿತ

Advertisement

ಪ್ರಧಾನಿ ಮೋದಿ ನೋಡಲು ಬ್ಯಾರಿಕೇಡ್ ಹಿಂದೆ ನಿಂತ ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಸಚಿವರು; ಕಾಂಗ್ರೆಸ್​ ಗೇಲಿ..!!

ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿದ್ದರು. ಗ್ರೀಸ್​​ನಿಂದ ನೇರವಾಗಿ ಹೆಚ್​​ಎಎಲ್​ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ ಪ್ರಧಾನಿ, ರಸ್ತೆ ಮಾರ್ಗದ ಮೂಲಕ ಪೀಣ್ಯ ಬಳಿಯಿರುವ ಇಸ್ರೋಗೆ ಭೇಟಿ ನೀಡಿದ್ದರು.

ಈ ಸಂದರ್ಭದಲ್ಲಿ ಮೋದಿಯನ್ನು ಸ್ವಾಗತಿಸಲು ರಸ್ತೆ ಬದಿಯಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರು ನಿಂತಿದ್ದರು. ರಸ್ತೆಯ ಬ್ಯಾರಿಕೇಡ್​ ಹಿಂದೆ ನಾಯಕರು ನಿಂತಿರೋ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗುತ್ತಿದ್ದಂತೆಯೇ, ಬಿಜೆಪಿಯನ್ನು ಕಾಂಗ್ರೆಸ್​ ನಾಯಕರು ಗೇಲಿ ಮಾಡಿದ್ದಾರೆ.

Image

ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷ, ಮಾಜಿ ಎಂಎಲ್‌ಸಿ ರಮೇಶ್ ಬಾಬು ಟ್ವೀಟ್ ಮಾಡಿ, ಇಂಥ ದುರಂತವನ್ನು ನೀವು ಸರ್ವಾಧಿಕಾರಿ ಆಡಳಿತದಲ್ಲಿ ಮಾತ್ರ ನೋಡಲು ಸಾಧ್ಯ. ಮೋದಿ ಭೇಟಿ ವೇಳೆ ರಾಜ್ಯ ಬಿಜೆಪಿ ನಾಯಕರನ್ನು ನಾಯಿಗಿಂತ ಕಡೆಯಾಗಿ ನೋಡಲಾಗಿದೆ. ಬಿಜೆಪಿ ಆರ್​ಎಸ್​ಎಸ್​ನಲ್ಲಿ ಆತ್ಮಾಭಿಮಾನ ಸಂಸ್ಕೃತಿ ಕಳೆದು ಹೋಗಿದೆ, ಜೈ ಮೋದಿ ಎಂದು ಅಪಹಾಸ್ಯ ಮಾಡಿದ್ದಾರೆ

ಕರ್ನಾಟಕ ಕಾಂಗ್ರೆಸ್​ ಟ್ವೀಟ್ ಮಾಡಿ, ಬಿಜೆಪಿ ನಾಯಕರದ್ದು ಎಂತಹ ದುಸ್ಥಿತಿ.. ರಾಜ್ಯ ಬಿಜೆಪಿಯ ‘ದಂಡ’ನಾಯಕರು, ಚಕ್ರವರ್ತಿಗಳು, ಸಾಮ್ರಾಟರೆಲ್ಲಾ ಬೀದಿ ಪಾಲಾಗಿದ್ದಾರೆ! ಬಿಜೆಪಿಯ ಹೈಕಮಾಂಡ್ ಹಾಗೂ ಮೋದಿ ಹೀನಾಯ ಸೋಲಿನ ಬಳಿಕ ರಾಜ್ಯದ ನಾಯಕರನ್ನು ಹತ್ತಿರಕ್ಕೂ ಸೇರಿಸದೇ ಬೀದಿ ಪಾಲು ಮಾಡಿದ್ದಾರೆ ಎಂಬುದಕ್ಕೆ ಈ ಚಿತ್ರಗಳೇ ಸಾಕ್ಷಿ! ಛೇ, ಮಿನಿಮಮ್ ಮರ್ಯಾದೆಯೂ ಇಲ್ಲದಾಯಿತೇ? ಎಂದು ಟ್ವಿಟ್ ಮಾಡಿದೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!