ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿದ್ದರು. ಗ್ರೀಸ್ನಿಂದ ನೇರವಾಗಿ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ ಪ್ರಧಾನಿ, ರಸ್ತೆ ಮಾರ್ಗದ ಮೂಲಕ ಪೀಣ್ಯ ಬಳಿಯಿರುವ ಇಸ್ರೋಗೆ ಭೇಟಿ ನೀಡಿದ್ದರು.
ಈ ಸಂದರ್ಭದಲ್ಲಿ ಮೋದಿಯನ್ನು ಸ್ವಾಗತಿಸಲು ರಸ್ತೆ ಬದಿಯಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರು ನಿಂತಿದ್ದರು. ರಸ್ತೆಯ ಬ್ಯಾರಿಕೇಡ್ ಹಿಂದೆ ನಾಯಕರು ನಿಂತಿರೋ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗುತ್ತಿದ್ದಂತೆಯೇ, ಬಿಜೆಪಿಯನ್ನು ಕಾಂಗ್ರೆಸ್ ನಾಯಕರು ಗೇಲಿ ಮಾಡಿದ್ದಾರೆ.
ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷ, ಮಾಜಿ ಎಂಎಲ್ಸಿ ರಮೇಶ್ ಬಾಬು ಟ್ವೀಟ್ ಮಾಡಿ, ಇಂಥ ದುರಂತವನ್ನು ನೀವು ಸರ್ವಾಧಿಕಾರಿ ಆಡಳಿತದಲ್ಲಿ ಮಾತ್ರ ನೋಡಲು ಸಾಧ್ಯ. ಮೋದಿ ಭೇಟಿ ವೇಳೆ ರಾಜ್ಯ ಬಿಜೆಪಿ ನಾಯಕರನ್ನು ನಾಯಿಗಿಂತ ಕಡೆಯಾಗಿ ನೋಡಲಾಗಿದೆ. ಬಿಜೆಪಿ ಆರ್ಎಸ್ಎಸ್ನಲ್ಲಿ ಆತ್ಮಾಭಿಮಾನ ಸಂಸ್ಕೃತಿ ಕಳೆದು ಹೋಗಿದೆ, ಜೈ ಮೋದಿ ಎಂದು ಅಪಹಾಸ್ಯ ಮಾಡಿದ್ದಾರೆ
ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿ, ಬಿಜೆಪಿ ನಾಯಕರದ್ದು ಎಂತಹ ದುಸ್ಥಿತಿ.. ರಾಜ್ಯ ಬಿಜೆಪಿಯ ‘ದಂಡ’ನಾಯಕರು, ಚಕ್ರವರ್ತಿಗಳು, ಸಾಮ್ರಾಟರೆಲ್ಲಾ ಬೀದಿ ಪಾಲಾಗಿದ್ದಾರೆ! ಬಿಜೆಪಿಯ ಹೈಕಮಾಂಡ್ ಹಾಗೂ ಮೋದಿ ಹೀನಾಯ ಸೋಲಿನ ಬಳಿಕ ರಾಜ್ಯದ ನಾಯಕರನ್ನು ಹತ್ತಿರಕ್ಕೂ ಸೇರಿಸದೇ ಬೀದಿ ಪಾಲು ಮಾಡಿದ್ದಾರೆ ಎಂಬುದಕ್ಕೆ ಈ ಚಿತ್ರಗಳೇ ಸಾಕ್ಷಿ! ಛೇ, ಮಿನಿಮಮ್ ಮರ್ಯಾದೆಯೂ ಇಲ್ಲದಾಯಿತೇ? ಎಂದು ಟ್ವಿಟ್ ಮಾಡಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…