ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿದ್ದರು. ಗ್ರೀಸ್ನಿಂದ ನೇರವಾಗಿ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ ಪ್ರಧಾನಿ, ರಸ್ತೆ ಮಾರ್ಗದ ಮೂಲಕ ಪೀಣ್ಯ ಬಳಿಯಿರುವ ಇಸ್ರೋಗೆ ಭೇಟಿ ನೀಡಿದ್ದರು.
ಈ ಸಂದರ್ಭದಲ್ಲಿ ಮೋದಿಯನ್ನು ಸ್ವಾಗತಿಸಲು ರಸ್ತೆ ಬದಿಯಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರು ನಿಂತಿದ್ದರು. ರಸ್ತೆಯ ಬ್ಯಾರಿಕೇಡ್ ಹಿಂದೆ ನಾಯಕರು ನಿಂತಿರೋ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗುತ್ತಿದ್ದಂತೆಯೇ, ಬಿಜೆಪಿಯನ್ನು ಕಾಂಗ್ರೆಸ್ ನಾಯಕರು ಗೇಲಿ ಮಾಡಿದ್ದಾರೆ.
ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷ, ಮಾಜಿ ಎಂಎಲ್ಸಿ ರಮೇಶ್ ಬಾಬು ಟ್ವೀಟ್ ಮಾಡಿ, ಇಂಥ ದುರಂತವನ್ನು ನೀವು ಸರ್ವಾಧಿಕಾರಿ ಆಡಳಿತದಲ್ಲಿ ಮಾತ್ರ ನೋಡಲು ಸಾಧ್ಯ. ಮೋದಿ ಭೇಟಿ ವೇಳೆ ರಾಜ್ಯ ಬಿಜೆಪಿ ನಾಯಕರನ್ನು ನಾಯಿಗಿಂತ ಕಡೆಯಾಗಿ ನೋಡಲಾಗಿದೆ. ಬಿಜೆಪಿ ಆರ್ಎಸ್ಎಸ್ನಲ್ಲಿ ಆತ್ಮಾಭಿಮಾನ ಸಂಸ್ಕೃತಿ ಕಳೆದು ಹೋಗಿದೆ, ಜೈ ಮೋದಿ ಎಂದು ಅಪಹಾಸ್ಯ ಮಾಡಿದ್ದಾರೆ
ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿ, ಬಿಜೆಪಿ ನಾಯಕರದ್ದು ಎಂತಹ ದುಸ್ಥಿತಿ.. ರಾಜ್ಯ ಬಿಜೆಪಿಯ ‘ದಂಡ’ನಾಯಕರು, ಚಕ್ರವರ್ತಿಗಳು, ಸಾಮ್ರಾಟರೆಲ್ಲಾ ಬೀದಿ ಪಾಲಾಗಿದ್ದಾರೆ! ಬಿಜೆಪಿಯ ಹೈಕಮಾಂಡ್ ಹಾಗೂ ಮೋದಿ ಹೀನಾಯ ಸೋಲಿನ ಬಳಿಕ ರಾಜ್ಯದ ನಾಯಕರನ್ನು ಹತ್ತಿರಕ್ಕೂ ಸೇರಿಸದೇ ಬೀದಿ ಪಾಲು ಮಾಡಿದ್ದಾರೆ ಎಂಬುದಕ್ಕೆ ಈ ಚಿತ್ರಗಳೇ ಸಾಕ್ಷಿ! ಛೇ, ಮಿನಿಮಮ್ ಮರ್ಯಾದೆಯೂ ಇಲ್ಲದಾಯಿತೇ? ಎಂದು ಟ್ವಿಟ್ ಮಾಡಿದೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…