ಜನ ಮನದ ನಾಡಿ ಮಿಡಿತ

Advertisement

ಅಪರೂಪದ ಮೂಳೆ ಮಜ್ಜೆ ಕಸಿ ಯಶಸ್ವಿ;ಮೊದಲ ಪ್ರಕರಣ 

ಸಿವಿಯರ್‌ ಕಂಬೈನ್ಡ್ ಇಮ್ಯುನೊಡಿಫಿಶಿಯೆನ್ಸಿ ಎಂಬ ತೀವ್ರ ತರಹದ ರೋಗ ನಿರೋಧಕ ಶಕ್ತಿಯ ಕೊರತೆಯಿಂದ ಬಳಲುತ್ತಿರುವ ಮಗುವಿಗೆ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ವೈದ್ಯರ ತಂಡವು ಯಶಸ್ವಿ ಗ್ರಾಫ್ಟ್ ಮ್ಯಾನಿಪುಲೇಟೆಡ್‌ ಅರ್ಧ- ಹೊಂದಾಣಿಕೆಯ ಅಸ್ಥಿ ಮಜ್ಜೆ ಕಸಿ ನಡೆಸಿದೆ. ಇದು ಕರಾವಳಿ ಕರ್ನಾಟಕದಲ್ಲಿ ಮೊದಲ ಪ್ರಕರಣವಾಗಿದೆ.

ಅಪರೂಪದ ರಕ್ತದ ಕಾಯಿಲೆಯಿಂದ ಬಳಲುತ್ತಿರುವ ಮಗುವನ್ನು ಉಳಿಸಲು ಆಸ್ಪತ್ರೆಯ ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕಾಲಜಿ ವಿಭಾಗದ ವೈದ್ಯರ ತಂಡವು ವಿಶಿಷ್ಟವಾದ ಅಸ್ಥಿಮಜ್ಜೆಯ ಕಸಿ ಮಾಡಲು ನಿರ್ಧರಿಸಿತ್ತು.

ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ| ಅರ್ಚನಾ ಎಂ.ವಿ. ಮಾತನಾಡಿ, “ರೋಗಿಯು ಮಾರಣಾಂತಿಕ ಕ್ಷಯರೋಗದ ಸೋಂಕಿನಿಂದ ಬಳಲುತ್ತಿದ್ದ ಕಾರಣ ಕೀಮೋಥೆರಪಿ ಮತ್ತು ಇಮ್ಯುನೊಸಪ್ರಸಿವ್‌ ಔಷಧಗಳನ್ನು ಬಳಸಲಾಗಲಿಲ್ಲ. ಅಂತಹ ಔಷಧಗಳನ್ನು ತಪ್ಪಿಸಲು, ಟಿಸಿಆರ್‌ ಆಲ್ಫಾ ಬೀಟಾ ಡಿಪ್ಲೀಷನ್‌ ಎಂದು ಕರೆಯಲ್ಪಡುವ ಸ್ಟೆಮ್‌ ಸೆಲ್‌ ಗ್ರಾಫ್ಟ್ ಮ್ಯಾನಿಪ್ಯುಲೇಶನ್‌ ತಂತ್ರಜ್ಞಾನವನ್ನು ಬಳಸಲಾಯಿತು ಎಂದರು.

ಮಗುವಿಗೆ ಮೂಳೆ ಮಜ್ಜೆಯ ಕಸಿ ನಡೆಸಿ, 6 ವಾರಗಳ ಅನಂತರ ಸ್ಥಿರ ಸ್ಥಿತಿಯಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಮಗುವು ರೋಗ ಮತ್ತು ಸೋಂಕಿನಿಂದ ಮುಕ್ತವಾಗಿ, ಆರೋಗ್ಯಕರ ಜೀವನ ನಡೆಸುವಂತಾಗಿದೆ ಎಂದರು.

ಮಕ್ಕಳ ರಕ್ತ ಶಾಸ್ತ್ರ ಮತ್ತು ಆಂಕಾಲಜಿ ವಿಭಾಗದ ಮುಖ್ಯಸ್ಥ ಡಾ| ವಾಸುದೇವ ಭಟ್‌ ಕೆ. ಮಾಹಿತಿ ನೀಡಿ, ರಾಜ್ಯದ ಕರಾವಳಿ ಪ್ರದೇಶದಲ್ಲಿ ಯಶಸ್ವಿ ಟಿ ಸೆಲ್‌-ಡಿಪ್ಲೀಟೆಡ್‌ ಹ್ಯಾಪ್ಲೋಡೆಂಟಿಕಲ್‌ ಬೋನ್‌ ಮ್ಯಾರೋ ಟ್ರಾನ್ಸ್‌ಪ್ಲಾಂಟ್‌ಗೆ ಒಳಗಾದ ಮೊದಲ ಪ್ರಕರಣ ಇದು ಎಂದರು.

Leave a Reply

Your email address will not be published. Required fields are marked *

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

error: Content is protected !!