ಸಿವಿಯರ್ ಕಂಬೈನ್ಡ್ ಇಮ್ಯುನೊಡಿಫಿಶಿಯೆನ್ಸಿ ಎಂಬ ತೀವ್ರ ತರಹದ ರೋಗ ನಿರೋಧಕ ಶಕ್ತಿಯ ಕೊರತೆಯಿಂದ ಬಳಲುತ್ತಿರುವ ಮಗುವಿಗೆ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ವೈದ್ಯರ ತಂಡವು ಯಶಸ್ವಿ ಗ್ರಾಫ್ಟ್ ಮ್ಯಾನಿಪುಲೇಟೆಡ್ ಅರ್ಧ- ಹೊಂದಾಣಿಕೆಯ ಅಸ್ಥಿ ಮಜ್ಜೆ ಕಸಿ ನಡೆಸಿದೆ. ಇದು ಕರಾವಳಿ ಕರ್ನಾಟಕದಲ್ಲಿ ಮೊದಲ ಪ್ರಕರಣವಾಗಿದೆ.
ಅಪರೂಪದ ರಕ್ತದ ಕಾಯಿಲೆಯಿಂದ ಬಳಲುತ್ತಿರುವ ಮಗುವನ್ನು ಉಳಿಸಲು ಆಸ್ಪತ್ರೆಯ ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕಾಲಜಿ ವಿಭಾಗದ ವೈದ್ಯರ ತಂಡವು ವಿಶಿಷ್ಟವಾದ ಅಸ್ಥಿಮಜ್ಜೆಯ ಕಸಿ ಮಾಡಲು ನಿರ್ಧರಿಸಿತ್ತು.
ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ| ಅರ್ಚನಾ ಎಂ.ವಿ. ಮಾತನಾಡಿ, “ರೋಗಿಯು ಮಾರಣಾಂತಿಕ ಕ್ಷಯರೋಗದ ಸೋಂಕಿನಿಂದ ಬಳಲುತ್ತಿದ್ದ ಕಾರಣ ಕೀಮೋಥೆರಪಿ ಮತ್ತು ಇಮ್ಯುನೊಸಪ್ರಸಿವ್ ಔಷಧಗಳನ್ನು ಬಳಸಲಾಗಲಿಲ್ಲ. ಅಂತಹ ಔಷಧಗಳನ್ನು ತಪ್ಪಿಸಲು, ಟಿಸಿಆರ್ ಆಲ್ಫಾ ಬೀಟಾ ಡಿಪ್ಲೀಷನ್ ಎಂದು ಕರೆಯಲ್ಪಡುವ ಸ್ಟೆಮ್ ಸೆಲ್ ಗ್ರಾಫ್ಟ್ ಮ್ಯಾನಿಪ್ಯುಲೇಶನ್ ತಂತ್ರಜ್ಞಾನವನ್ನು ಬಳಸಲಾಯಿತು ಎಂದರು.
ಮಗುವಿಗೆ ಮೂಳೆ ಮಜ್ಜೆಯ ಕಸಿ ನಡೆಸಿ, 6 ವಾರಗಳ ಅನಂತರ ಸ್ಥಿರ ಸ್ಥಿತಿಯಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಮಗುವು ರೋಗ ಮತ್ತು ಸೋಂಕಿನಿಂದ ಮುಕ್ತವಾಗಿ, ಆರೋಗ್ಯಕರ ಜೀವನ ನಡೆಸುವಂತಾಗಿದೆ ಎಂದರು.
ಮಕ್ಕಳ ರಕ್ತ ಶಾಸ್ತ್ರ ಮತ್ತು ಆಂಕಾಲಜಿ ವಿಭಾಗದ ಮುಖ್ಯಸ್ಥ ಡಾ| ವಾಸುದೇವ ಭಟ್ ಕೆ. ಮಾಹಿತಿ ನೀಡಿ, ರಾಜ್ಯದ ಕರಾವಳಿ ಪ್ರದೇಶದಲ್ಲಿ ಯಶಸ್ವಿ ಟಿ ಸೆಲ್-ಡಿಪ್ಲೀಟೆಡ್ ಹ್ಯಾಪ್ಲೋಡೆಂಟಿಕಲ್ ಬೋನ್ ಮ್ಯಾರೋ ಟ್ರಾನ್ಸ್ಪ್ಲಾಂಟ್ಗೆ ಒಳಗಾದ ಮೊದಲ ಪ್ರಕರಣ ಇದು ಎಂದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…