ಸಿವಿಯರ್ ಕಂಬೈನ್ಡ್ ಇಮ್ಯುನೊಡಿಫಿಶಿಯೆನ್ಸಿ ಎಂಬ ತೀವ್ರ ತರಹದ ರೋಗ ನಿರೋಧಕ ಶಕ್ತಿಯ ಕೊರತೆಯಿಂದ ಬಳಲುತ್ತಿರುವ ಮಗುವಿಗೆ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ವೈದ್ಯರ ತಂಡವು ಯಶಸ್ವಿ ಗ್ರಾಫ್ಟ್ ಮ್ಯಾನಿಪುಲೇಟೆಡ್ ಅರ್ಧ- ಹೊಂದಾಣಿಕೆಯ ಅಸ್ಥಿ ಮಜ್ಜೆ ಕಸಿ ನಡೆಸಿದೆ. ಇದು ಕರಾವಳಿ ಕರ್ನಾಟಕದಲ್ಲಿ ಮೊದಲ ಪ್ರಕರಣವಾಗಿದೆ.
ಅಪರೂಪದ ರಕ್ತದ ಕಾಯಿಲೆಯಿಂದ ಬಳಲುತ್ತಿರುವ ಮಗುವನ್ನು ಉಳಿಸಲು ಆಸ್ಪತ್ರೆಯ ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕಾಲಜಿ ವಿಭಾಗದ ವೈದ್ಯರ ತಂಡವು ವಿಶಿಷ್ಟವಾದ ಅಸ್ಥಿಮಜ್ಜೆಯ ಕಸಿ ಮಾಡಲು ನಿರ್ಧರಿಸಿತ್ತು.
ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ| ಅರ್ಚನಾ ಎಂ.ವಿ. ಮಾತನಾಡಿ, “ರೋಗಿಯು ಮಾರಣಾಂತಿಕ ಕ್ಷಯರೋಗದ ಸೋಂಕಿನಿಂದ ಬಳಲುತ್ತಿದ್ದ ಕಾರಣ ಕೀಮೋಥೆರಪಿ ಮತ್ತು ಇಮ್ಯುನೊಸಪ್ರಸಿವ್ ಔಷಧಗಳನ್ನು ಬಳಸಲಾಗಲಿಲ್ಲ. ಅಂತಹ ಔಷಧಗಳನ್ನು ತಪ್ಪಿಸಲು, ಟಿಸಿಆರ್ ಆಲ್ಫಾ ಬೀಟಾ ಡಿಪ್ಲೀಷನ್ ಎಂದು ಕರೆಯಲ್ಪಡುವ ಸ್ಟೆಮ್ ಸೆಲ್ ಗ್ರಾಫ್ಟ್ ಮ್ಯಾನಿಪ್ಯುಲೇಶನ್ ತಂತ್ರಜ್ಞಾನವನ್ನು ಬಳಸಲಾಯಿತು ಎಂದರು.
ಮಗುವಿಗೆ ಮೂಳೆ ಮಜ್ಜೆಯ ಕಸಿ ನಡೆಸಿ, 6 ವಾರಗಳ ಅನಂತರ ಸ್ಥಿರ ಸ್ಥಿತಿಯಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಮಗುವು ರೋಗ ಮತ್ತು ಸೋಂಕಿನಿಂದ ಮುಕ್ತವಾಗಿ, ಆರೋಗ್ಯಕರ ಜೀವನ ನಡೆಸುವಂತಾಗಿದೆ ಎಂದರು.
ಮಕ್ಕಳ ರಕ್ತ ಶಾಸ್ತ್ರ ಮತ್ತು ಆಂಕಾಲಜಿ ವಿಭಾಗದ ಮುಖ್ಯಸ್ಥ ಡಾ| ವಾಸುದೇವ ಭಟ್ ಕೆ. ಮಾಹಿತಿ ನೀಡಿ, ರಾಜ್ಯದ ಕರಾವಳಿ ಪ್ರದೇಶದಲ್ಲಿ ಯಶಸ್ವಿ ಟಿ ಸೆಲ್-ಡಿಪ್ಲೀಟೆಡ್ ಹ್ಯಾಪ್ಲೋಡೆಂಟಿಕಲ್ ಬೋನ್ ಮ್ಯಾರೋ ಟ್ರಾನ್ಸ್ಪ್ಲಾಂಟ್ಗೆ ಒಳಗಾದ ಮೊದಲ ಪ್ರಕರಣ ಇದು ಎಂದರು.
ಬಸ್ವೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ…
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…