ಭಾರತ್ ಗೌರವ್ ಟೂರಿಸ್ಟ್ ಟ್ರೈನ್ನಲ್ಲಿ ಬೆಂಕಿ ಕಾಣಿಸಿಕೊಂಡು 8 ಮಂದಿ ಸಜೀವ ದಹನಗೊಂಡಿರುವ ಘಟನೆ ತಮಿಳುನಾಡಿನ ಮಧುರೈ ರೈಲ್ವೇ ನಿಲ್ದಾಣದ ಬಳಿ ನಡೆದಿದೆ.

ದುರ್ಘಟನೆಯಲ್ಲಿ 20ಕ್ಕೂ ಹೆಚ್ಚು ಜನರಿಗೆ ಗಂಭೀರವಾಗಿ ಗಾಯಗೊಂಡಿದ್ದು, ರೈಲು ಉತ್ತರ ಪ್ರದೇಶದ ಲಖನೌನಿಂದ ರಾಮೇಶ್ವರಂಗೆ ಹೊರಟಿತ್ತು.
ಪ್ರಯಾಣಿಕರು ಗ್ಯಾಸ್ ಸ್ಟೋ ಮೂಲಕ ರೈಲಿನಲ್ಲಿ ಅಡುಗೆ ಮಾಡಿಕೊಂಡಿರುವುದೇ ಬೆಂಕಿಗೆ ಕಾರಣ ಎನ್ನಲಾಗಿದೆ. ದುರಂತದ ಬಗ್ಗೆ ತನಿಖೆಯನ್ನು ಆರಂಭಿಸಿದ್ದೇವೆ ಎಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯಲ್ಲಿ ಪ್ರಾಣಕಳೆದುಕೊಂಡವರಲ್ಲಿ ಆರು ಜನ ಉತ್ತರ ಪ್ರದೇಶದವರು ಎಂದು ತಿಳಿದುಬಂದಿದೆ.



