ಜನ ಮನದ ನಾಡಿ ಮಿಡಿತ

Advertisement

ಶ್ರೀಲಂಕಾ ಸುಪಾರಿ ಕಿಲ್ಲರ್ಸ್​ ಕೇಸ್: ಲಕ್ಷ ಲಕ್ಷ ಹಣ ಸೀಜ್..!

ಬೆಂಗಳೂರಲ್ಲಿ ಇಂಟರ್ ನ್ಯಾಷನಲ್ ಮೋಸ್ಟ್ ವಾಟೆಂಡ್ ಕ್ರಿಮಿನಲ್ಸ್ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮತ್ತಿಬ್ಬರನ್ನು ಬಂಧಿಸಲಾಗಿದೆ.

ಈ ಮೂಲಕ ಶ್ರೀಲಂಕಾ ಸುಪಾರಿ ಕಿಲ್ಲರ್ಸ್ ಅರೆಸ್ಟ್​ ಕೇಸ್​ನಲ್ಲಿ ಸೆರೆಯಾದವರ ಸಂಖ್ಯೆ ಒಟ್ಟು 6ಕ್ಕೆ ಏರಿಕೆಯಾಗಿದೆ. ತೀವ್ರ ವಿಚಾರಣೆ ನಡೆಸುತ್ತಿರುವ ಸಿಸಿಬಿ ಅಧಿಕಾರಿಗಳಿಗೆ ಕೆಲವು ಸ್ಫೋಟಕ ವಿಚಾರಗಳು ಲಭ್ಯವಾಗಿದೆ.

ಇಂದು ಮನ್ಸೂರ್​ ಹಾಗೂ ಅನ್ಬು ಎಂಬ ಕ್ರಿಮಿನಲ್ಸ್​​ ಬಲೆಗೆ ಬಿದ್ದಿದ್ದಾರೆ. ಇವರಿಬ್ಬರು ಬಂಧಿತ ಲಂಕಾ ಕ್ರಿಮಿನಲ್ಸ್​ಗೆ ಪಾಸ್‌ಪೋರ್ಟ್ ಮಾಡಿಸಲು ಮುಂದಾಗಿದ್ದರು. ಭಾರತದಿಂದ ಪಾಸ್​​ಪೋರ್ಟ್ ಮಾಡಿಸಿ ಅವರನ್ನು ವಿದೇಶಕ್ಕೆ ಕಳುಹಿಸಲು ತಯಾರಿ ನಡೆಸುತ್ತಿದ್ದರು. ಅದಕ್ಕೆ ಬೇಕಾದ ದಾಖಲೆಗಳನ್ನು ಸಂಗ್ರಹ ಮಾಡಿಕೊಂಡಿದ್ದರು ಎನ್ನಲಾಗಿದೆ. ಬಂಧಿತ ಆರೋಪಿಗಳಿಂದ 57 ಲಕ್ಷ ನಗದು 1.5 ಕೋಟಿ ಡಿಡಿ ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿ ಮನ್ಸೂರ್ ಚೆನ್ನೈನಲ್ಲಿದ್ದುಕೊಂಡು ಅನ್ಬುಗೆ ಹಣಕಾಸಿನ ನೆರವು ನೀಡುತ್ತಿದ್ದ ಎಂದು ತನಿಖೆಯಲ್ಲಿ ಗೊತ್ತಾಗಿದೆ.

ಈ ಗ್ಯಾಂಗ್ ನೇಪಾಳದಲ್ಲಿರುವ ಸಂಜೀವ್ ಎನ್ನುವವನ್ನು ಭೇಟಿಯಾಗಿತ್ತು. ಸಂಜೀವ್ ಎಲ್​ಟಿಟಿಇ ಸಂಘಟನೆಯಲ್ಲಿ ಸಕ್ರಿಯನಾಗಿದ್ದ. ಬಂಧಿತ ಲಂಕಾ ಕ್ರಿಮಿನ್ಸ್ ಎಕೆ -47 ಬಳಸೋದನ್ನೂ ಸಹ ಟ್ರೈನಿಂಗ್ ಪಡೆದುಕೊಂಡಿದ್ದರು. ಅಂತೆಯೇ ಸಂಜೀವ್ ಜೊತೆ ಸೇರಿ ವಿಧ್ವಂಸಕ ಕೃತ್ಯ ಎಸೆಗಲು ಪ್ಲಾನ್ ಮಾಡಿದ್ದರು ಎನ್ನಲಾಗಿದೆ.

ಅನುಮಾನಕ್ಕೆ ಪುಷ್ಟಿ ಎಂಬಂತೆ ಈ ಗ್ಯಾಂಗ್, ನೇಪಾಳದ ಸಂಜೀವ್ ಜೊತೆ ಮಾತುಕತೆ ನಡೆಸಿರುವ ಸಂಭಾಷಣೆ ಕೂಡ ಲಭ್ಯವಾಗಿದೆ. ಈ ಮಾತುಕತೆಯು ಶ್ರೀಲಂಕಾದ ಪ್ರಾದೇಶಿಕ ಭಾಷೆಯಲ್ಲಿದೆ. ಹೀಗಾಗಿ ಟ್ರಾನ್ಸ್​ಲೇಟರ್​ ಸಹಾಯ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ.


ಪ್ರಕರಣದ ಬಗ್ಗೆ ಮಾತನಾಡಿರುವ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಶರಣಪ್ಪ.. ಬೆಂಗಳೂರಿನಲ್ಲಿ ವಾಸ ಮಾಡಲು ಅವಕಾಶ ಕೊಟ್ಟಿದ್ದು ಪರಮೇಶ್. ಮನ್ಸೂರ್ ಎಂಬಾತನನ್ನು ಚೆನ್ನೈನಲ್ಲಿ ಬಂಧಿಸಲಾಗಿದೆ. ಜೊತೆಗೆ ಪಾಸ್​ಪೋರ್ಟ್ ಇತರೆ ದಾಖಲೆಗಳಿಗೆ ಸಹಾಯ ಮಾಡ್ತಿದ್ದ ಅನ್ಬೂನನ್ನೂ ಬಂಧಿಸಲಾಗಿದೆ. ಬಂಧಿತ ಜಲಾಲ್ ಶ್ರೀಲಂಕಾದಲ್ಲಿ ಡ್ರಗ್ಸ್ ಡೀಲರ್ ಆಗಿದ್ದ. ಈತನಿಗೆ ಕ್ರಿಮಿನಲ್ ಹಿನ್ನಲೆ ಇದೆ. ಯಾವ ಕಾರಣಕ್ಕೆ ಬೆಂಗಳೂರಿಗೆ ಬಂದಿದ್ದರು ಅನ್ನೋದು ತನಿಖೆಯಿಂದ ತಿಳಿಯಬೇಕಿದೆ. ಇಲ್ಲಿಯವರೆಗೂ ಆರು ಜನರನ್ನು ಬಂಧಿಸಲಾಗಿದೆ ಎಂದರು.

ಶ್ರೀಲಂಕಾದ ಸುಪಾರಿ ಕಿಲ್ಲರ್ಸ್​​ಗಳಾದ ಕಸನ್ ಕುಮಾರ್ ಸನಕ, ಅಮಿಲಾ ನೋವಾನ್ ಮತ್ತು ರಂಗಪ್ರಸಾದ್ ಎಂಬುವವರು ವೀಸಾ ಇಲ್ಲದೇ ಬೋಟ್ ಮುಖಾಂತರ ಭಾರತಕ್ಕೆ ನುಸುಳಿ ಬಂದಿದ್ದರು. ಇವರಿಗೆ ರೌಡಿಶೀಟರ್ ಜೈ ಪರಮೇಶ್ ಆಶ್ರಯ ನೀಡಿದ್ದ. ಈ ವಿಚಾರ ಗೊತ್ತಾಗುತ್ತಿದ್ದಂತೆಯೇ ರೌಡಿಶೀಟರ್​ ನಿವಾಸದ ಮೇಲೆ ದಾಳಿ ಮಾಡಿದ ಸಿಸಿಬಿ, ನಾಲ್ವರನ್ನು ನಿನ್ನೆ ಬಂಧಿಸಲಾಗಿದೆ. ಜಲಾನ್ ಎಂಬಾಂತ ತಲೆ ಮರೆಸಿಕೊಂಡಿದ್ದಾನೆ ಎನ್ನಲಾಗಿದೆ. ಕಳೆದ 20 ದಿನಗಳ ಹಿಂದೆ ಭಾರತಕ್ಕೆ ಎಂಟ್ರಿಯಾಗಿದ್ದ ಇವರು, ನಂತರದ ದಿನಗಳಲ್ಲಿ ಬೆಂಗಳೂರಿಗೆ ಬಂದಿದ್ದರು. ನಗರದ ಯಲಹಂಕ ಠಾಣೆ ವ್ಯಾಪ್ತಿಯ ಬಾಗಲೂರು ಕ್ರಾಸ್​ ಬಳಿ ವಾಸ್ತವ್ಯ ಹೂಡಿದ್ದರು.

ಕಸನ್ ಕುಮಾರ್ ಮೇಲೆ ನಾಲ್ಕು ಕೊಲೆ ಪ್ರಕರಣ, ಅಮಿಲಾ ನೋವಾನ್ ಮೇಲೆ ಐದು ಕೇಸ್, ರಂಗ ಪ್ರಸಾದ್ ಮೇಲೆ ಎರಡು ಕೊಲೆ ಮತ್ತು ಎರಡು ಹಲ್ಲೆ ಪ್ರಕರಣಗಳಿವೆ. ಬಂಧಿತರಿಂದ 13 ಮೊಬೈಲ್ ಫೋನ್, ಶ್ರೀಲಂಕಾ ವಿಳಾಸದ ವಿಸಿಟಿಂಗ್ ಕಾರ್ಡ್, ಬಸ್ ಟಿಕೆಟ್, ಪೇಪರ್ ಕಟಿಂಗ್ಸ್, ಹಲವು ಮಂದಿಯ ಆಧಾರ್ ಕಾರ್ಡ್​ ಝೆರಾಕ್ಸ್​ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳಿಂದ ವಶಕ್ಕೆ ಪಡೆದಿರುವ 13 ಫೋನ್​ಗಳನ್ನು FSLಗೆ ಕಳುಹಿಸಲಾಗಿದೆ. ಇವರ ಫ್ಲಾನಿಂಗ್ ಏನು, ಯಾವ ಯಾವ ಗ್ರೂಪ್​ಗಳಲ್ಲಿ ಸಕ್ರಿಯವಾಗಿದ್ದರು. ಮಾತ್ರವಲ್ಲ ಇವರ ಮುಂದಿನ ಪ್ಲಾನ್ ಏನಾಗಿತ್ತು ಅನ್ನೋದ್ರ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!