ಜನ ಮನದ ನಾಡಿ ಮಿಡಿತ

Advertisement

ಮೂಡಬಿದಿರೆ: ಯಕ್ಷಗಾನದ ನೇಪಥ್ಯ ಕಲಾವಿದ ಬೊಕ್ಕಸ ಜಗನ್ನಾಥ ರಾವ್ ನಿಧನ

ಮೂಡಬಿದಿರೆ: ನಾಟಕ, ಯಕ್ಷಗಾನ ವೇಷ ಭೂಷಣಗಳ ತಯಾರಕ, ಕಲಾವಿದ ಬೊಕ್ಕಸ ಜಗನ್ನಾಥ ರಾವ್ (76) ಅವರು ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನ ಹೊಂದಿದರು.

ಮೂಡುಬಿದಿರೆ ಚೌಟರ ಅರಮನೆಯ ಬೊಕ್ಕಸದ ಲೆಕ್ಕ ಬರೆಯುತ್ತಿದ್ದ ವಂಶದ ಕುಡಿಯಾಗಿರುವ ಬೊಕ್ಕಸ ಜಗನ್ನಾಥ ರಾವ್ ಅವರು ತನ್ನ 12ನೇ ವಯಸ್ಸಿನಿಂದಲೇ ತನ್ನ ತಂದೆಯ ಜತೆಗೂಡಿ ಟೈಲರಿಂಗ್ ಜತೆಗೆ ವೇಷಭೂಷಣ ಹೊಲಿಯುವ, ಮಣಿಸರಕು ಪೋಣಿಸುವ, ಕಿರೀಟಾದಿ ತಯಾರಿಸುವ ಕಲೆಗಳಲ್ಲಿ ತೊಡಗಿಸಿಕೊಂಡಿದ್ದರು.

ಕಲಾವಿದರಾಗಿದ್ದ ಮೂಡುಬಿದಿರೆ ದಿ.ಲಾಡಿ ಕೃಷ್ಣ ಶೆಟ್ಟಿ ಅವರು ಸುದೀರ್ಘ ಕಾಲ ತಮ್ಮ ಮೇಕಪ್ ಕೈಯಾಗಿದ್ದರು.
ಕುರಿಯ ವಿಠಲ ಶಾಸ್ತ್ರಿಯವರ ಒಡನಾಟದಿಂದಾಗಿ ಧರ್ಮಸ್ಥಳ ಮೇಳದ ಸಂಪರ್ಕ ಲಭಿಸಿ ಮೇಳಕ್ಕೆ ಪ್ರಥಮವಾಗಿ ವೇಷಭೂಷಣ ತಯಾರಿಸಿಕೊಟ್ಟಿದರು. ಬೇತಾಳದ ವೇಷ, ಛದ್ಮವೇಷ, ಮೆರವಣಿಗೆಗೆ ಬೇಕಾದ ವೇಷಭೂಷಣಣಗಳನ್ನು ತಯಾರಿಸುವಲ್ಲಿ, ಮಕ್ಕಳ ವೇಷ, ಮದುವೆ ಮಂಟಪದ ನಿರ್ಮಾಣ ಆಲಂಕಾರದಲ್ಲಿ ಗಮನ ಸೆಳೆದಿದ್ದರು.

ನೇಪಥ್ಯ ಕಲಾವಿದರಾಗಿ ಆರು ದಶಕಗಳಿಗೂ ಮಿಗಿಲಾದ ಅನುಭವ, ಭಾರತದಾದ್ಯಂತ ತಿರುಗಾಟ ನಡೆಸಿದವರು. ಶೇಣಿ, ಸಾಮಗರು, ಕುಂಬ್ಳೆ, ಎಂಪೆಕಟ್ಟೆ, ಪುತ್ತೂರು ನಾರಾಯಣ ಹೆಗ್ಡೆ ಸಹಿತ ಹಲವು ಕಲಾವಿದರ ನಿಕಟ ಸಂಪರ್ಕವನ್ನು ಹೊಂದಿದ್ದರು. , ಶಾಲೆ, ಕಾಲೇಜುಗಳ ವಾರ್ಷಿಕೋತ್ಸವಗಳಲ್ಲಿ, ಕಲಾಸಂಘಗಳ ಆಟಗಳಲ್ಲಿ ತಮ್ಮ ವೇಷಭೂಷಣಗಳು ಮೆರೆದಿದೆ. ಮೂಡುಬಿದಿರೆಯ ಶ್ರೀ ಕೃಷ್ಣ ಫ್ರೆಂಡ್ಸ್ ಸರ್ಕಲ್ ಸಹಿತ ಹಲವಾರು ಕಡೆಗಳಲ್ಲಿ ಸನ್ಮಾನಕ್ಕೆ ಪಾತ್ರರಾಗಿದ್ದರು.
ಮೂಡುಬಿದಿರೆಯ ನಾಗರಕಟ್ಟೆಯಲ್ಲಿ ವಾಸವಾಗಿದ್ದ ಅವರು ಪತ್ನಿ ಸತ್ಯವತಿ ಸಹಿತ ಸಹೋದರರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!