ಜನ ಮನದ ನಾಡಿ ಮಿಡಿತ

Advertisement

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಉಮ್ಮರ್ ಫಾರೂಕ್ ಬಂಧನ

ಬಂಟ್ವಾಳ: ಕೊಲೆ ಯತ್ನ,ದರೋಡೆ, ಕಳ್ಳತನ ಸಹಿತ ವಿವಿಧ ಪ್ರಕರಣಗಳಲ್ಲಿ ಜಿಲ್ಲೆಯ ಬಹುತೇಕ ಎಲ್ಲಾ ಠಾಣೆಗಳಲ್ಲಿ ಆರೋಪಿಯಾಗಿದ್ದು,ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸ್ ಠಾಣಾ ಎಸ್.ಐ.ರಾಮಕೃಷ್ಣ ನೇತ್ರತ್ವದ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ನಡೆದಿದೆ.


ಸಜೀಪ ಮುನ್ನೂರು ಗ್ರಾಮದ ಪೆರುವ ನಿವಾಸಿ ಇಬ್ರಾಹಿಂ ಅವರ ಮಗ ಉಮ್ಮರ್ ಫಾರೂಕ್ ಬಂಧಿತ ಆರೋಪಿ.
ಸುಮಾರು 17 ಪ್ರಕರಣಗಳಲ್ಲಿ ಉಮ್ಮರ್ ಫಾರೂಕ್ ಅವರು ಆರೋಪಿಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.


ಈತ ಬಂಟ್ವಾಳ ನಗರ, ಗ್ರಾಮಾಂತರ, ಉಪ್ಪಿನಂಗಡಿ, ಬಜಪೆ,ಕೋಣಾಜೆ,ಬರ್ಕೆ,ವಿಟ್ಲ,ಕಡಬ ಹೀಗೆ ಜಿಲ್ಲೆಯ ಬಹುತೇಕ ಎಲ್ಲಾ ಠಾಣೆಗಳಲ್ಲಿ ಈತನ ವಿರುದ್ದ ಒಂದಲ್ಲ ಒಂದು ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.


ಇಂದು ಬೆಳಿಗ್ಗೆ ಈತ ಮಾಣಿ ಪರಿಸರದಲ್ಲಿ ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ನಗರ ಠಾಣಾ ಪೋಲೀಸರು ಈತನ ಬಂಧನಕ್ಕೆ ಬಲೆಬೀಸಿದ್ದರು.


ನಗರ ಠಾ಼ಣಾ ಎಸ್.ಐ.ರಾಮಕೃಷ್ಣ ನೇತ್ರತ್ವದಲ್ಲಿ ಪೋಲೀಸ್ ಸಿಬ್ಬಂದಿಗಳಾದ ಗಣೇಶ್,ಮೋಹನ್ ಅವರು ಕಾರ್ಯಚರಣೆ ನಡೆಸಿ ಮಾಣಿಯಲ್ಲಿ ಈತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ನ್ಯಾಯಾಲಯ ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!