ಜನ ಮನದ ನಾಡಿ ಮಿಡಿತ

Advertisement

ತೋಕೂರು: ಕ್ಷೇತ್ರದ ಅಭಿವೃದ್ಧಿಯಲ್ಲಿ ಭಕ್ತರ ಹಾಗೂ ದಾನಿಗಳ ಶ್ರಮ ಅನನ್ಯ -ಡಾ. ಹರಿಕೃಷ್ಣ ಪುನರೂರು

ಮುಲ್ಕಿ: ಹಳೆಯಂಗಡಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ನವೀಕೃತ ದೇಗುಲದಲ್ಲಿ “ಪುನಃಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕ, ನಾಗಮಂಡಲೋತ್ಸವ ಹಾಗೂ ದೈವದ ನೇಮೋತ್ಸವವು ಯಶಸ್ವಿಯಾಗಿ ನಡೆದ ಹಿನ್ನೆಲೆಯಲ್ಲಿ ಭಾನುವಾರ ದೇವಳದ ಸಭಾಭವನದಲ್ಲಿ ಭಕ್ತರ ಹಾಗೂ ವಿವಿಧ ಸಮಿತಿಯ ಸದಸ್ಯರ ವಿಶೇಷ ಸಭೆ ನಡೆಯಿತು.

ಸಭೆ ಅಧ್ಯಕ್ಷತೆಯನ್ನು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ. ಹರಿಕೃಷ್ಣ ಪುನರೂರು ಮಾತನಾಡಿ ಕ್ಷೇತ್ರದ ಬ್ರಹ್ಮಕಲಶೋತ್ಸವ ಹಾಗೂ ಜೀರ್ಣೋದ್ದಾರ ಕಾರ್ಯದಲ್ಲಿ ಅಸಂಖ್ಯಾತ ದಾನಿಗಳು ಹಾಗೂ ಭಕ್ತರು ಸಹಕರಿಸಿದ್ದು ಮುಂದಿನ ದಿನಗಳಲ್ಲಿ ಕ್ಷೇತ್ರದಲ್ಲಿ ನಡೆಯುವ ದೃಢಕಲಶ , ಕ್ಷೇತ್ರಕ್ಕೆ ನೂತನ ಗೋಪುರ ಹಾಗೂ ಉಳಿದ ಕಾಮಗಾರಿಗಳಿಗೆ ಭಕ್ತರು ಸಹಕರಿಸಬೇಕು ಎಂದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಹರಿದಾಸ್ ಭಟ್ ರವರು ಬ್ರಹ್ಮಕಲಶ ಮಹೋತ್ಸವದ ಲೆಕ್ಕ ಪತ್ರ,ಮುಂದಿನ ಕಾರ್ಯ ಯೋಜನೆಯ ಬಗ್ಗೆ ಮಾತನಾಡಿದರು.ಸಭೆಯಲ್ಲಿ ಕ್ಷೇತ್ರದ ಅರ್ಚಕ ಮಧುಸೂದನ್ ಆಚಾರ್ಯ, ಮಾಜೀ ಧಾರ್ಮಿಕ ಪರಿಷತ್ ಸದಸ್ಯ ಭುವನಾಭಿರಾಮ ಉಡುಪ, ಸಮಿತಿಯ ಉಪಾಧ್ಯಕ್ಷ ಮೋಹನ ದಾಸ್, ಎಸ್ಕೆಪಿಎ ನ ಮೋಹನ್ ರಾವ್ ಭಕ್ತಾದಿಗಳು ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!