ಮುಲ್ಕಿ: ಹಳೆಯಂಗಡಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ನವೀಕೃತ ದೇಗುಲದಲ್ಲಿ “ಪುನಃಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕ, ನಾಗಮಂಡಲೋತ್ಸವ ಹಾಗೂ ದೈವದ ನೇಮೋತ್ಸವವು ಯಶಸ್ವಿಯಾಗಿ ನಡೆದ ಹಿನ್ನೆಲೆಯಲ್ಲಿ ಭಾನುವಾರ ದೇವಳದ ಸಭಾಭವನದಲ್ಲಿ ಭಕ್ತರ ಹಾಗೂ ವಿವಿಧ ಸಮಿತಿಯ ಸದಸ್ಯರ ವಿಶೇಷ ಸಭೆ ನಡೆಯಿತು.
ಸಭೆ ಅಧ್ಯಕ್ಷತೆಯನ್ನು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ. ಹರಿಕೃಷ್ಣ ಪುನರೂರು ಮಾತನಾಡಿ ಕ್ಷೇತ್ರದ ಬ್ರಹ್ಮಕಲಶೋತ್ಸವ ಹಾಗೂ ಜೀರ್ಣೋದ್ದಾರ ಕಾರ್ಯದಲ್ಲಿ ಅಸಂಖ್ಯಾತ ದಾನಿಗಳು ಹಾಗೂ ಭಕ್ತರು ಸಹಕರಿಸಿದ್ದು ಮುಂದಿನ ದಿನಗಳಲ್ಲಿ ಕ್ಷೇತ್ರದಲ್ಲಿ ನಡೆಯುವ ದೃಢಕಲಶ , ಕ್ಷೇತ್ರಕ್ಕೆ ನೂತನ ಗೋಪುರ ಹಾಗೂ ಉಳಿದ ಕಾಮಗಾರಿಗಳಿಗೆ ಭಕ್ತರು ಸಹಕರಿಸಬೇಕು ಎಂದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಹರಿದಾಸ್ ಭಟ್ ರವರು ಬ್ರಹ್ಮಕಲಶ ಮಹೋತ್ಸವದ ಲೆಕ್ಕ ಪತ್ರ,ಮುಂದಿನ ಕಾರ್ಯ ಯೋಜನೆಯ ಬಗ್ಗೆ ಮಾತನಾಡಿದರು.ಸಭೆಯಲ್ಲಿ ಕ್ಷೇತ್ರದ ಅರ್ಚಕ ಮಧುಸೂದನ್ ಆಚಾರ್ಯ, ಮಾಜೀ ಧಾರ್ಮಿಕ ಪರಿಷತ್ ಸದಸ್ಯ ಭುವನಾಭಿರಾಮ ಉಡುಪ, ಸಮಿತಿಯ ಉಪಾಧ್ಯಕ್ಷ ಮೋಹನ ದಾಸ್, ಎಸ್ಕೆಪಿಎ ನ ಮೋಹನ್ ರಾವ್ ಭಕ್ತಾದಿಗಳು ಮತ್ತಿತರರು ಉಪಸ್ಥಿತರಿದ್ದರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…