ಬಂಟ್ವಾಳ: ಪೋಲೀಸ್ ಠಾಣೆಯ ಕಾವಲು ಕಾಯುತ್ತಿದ್ದ ” ಬೊಗ್ಗಿ” ಅಪಘಾತಕ್ಕೆ ಒಳಗಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆಗೆ ಠಾಣೆಯ ಪೋಲೀಸರು ಕಣ್ಣೀರು ಹಾಕಿದ ಅಪರೂಪದ ಸನ್ನಿವೇಶ ನಡೆಯಿತು.
ಇದು ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ನಡೆದ ಘಟನೆ.
ಬಂಟ್ವಾಳ ಪೋಲೀಸ್ ಠಾಣೆಯಲ್ಲಿ ಸುಮಾರು 7 ವರ್ಷಗಿಂತಲೂ ಹೆಚ್ಚಿನ ಅವಧಿಯಿಂದ ಪೋಲೀಸ್ ಠಾಣೆಯ ಸದಸ್ಯರಾಗಿದ್ದು ರಾತ್ರಿ ಪಾಳಿಯಲ್ಲಿ ಕಾವಲುಗಾರನಂತೆ ಶಿಸ್ತಿನ ಕೆಲಸ ಮಾಡುತ್ತಿದ್ದ ಹೆಣ್ಣು ನಾಯಿ ಕಾರು ಅಪಘಾತದಲ್ಲಿ ಶನಿವಾರ ರಾತ್ರಿ ಸುಮಾರು 9 ಗಂಟೆ ವೇಳೆ ಠಾಣೆಯ ಅವರಣದಲ್ಲಿಯೇ ಸಾವನ್ನಪ್ಪಿದೆ.
ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಠಾಣೆ ಕಾರಿನಲ್ಲಿ ಬಂದಿದ್ದ ವ್ಯಕ್ತಿ ತನ್ನ ಕೆಲಸ ಮುಗಿಸಿ ವಾಪಸು ಹೋಗುವ ವೇಳೆ ಕಾರನ್ನು ರಿವರ್ಸ್ ತೆಗೆಯುವಾಗ ಅಲ್ಲೇ ಮಲಗಿದ್ದ ನಾಯಿಯ ಮೇಲೆ ಆತನಿಗೆ ಗೊತ್ತಿಲ್ಲದೆ ಕಾರು ಹರಿದಿದೆ. ಗಂಭೀರವಾಗಿ ಗಾಯಗೊಂಡ ನಾಯಿ ಸ್ಥಳದಲ್ಲಿ ಯೇ ಸಾವನ್ನಪ್ಪಿದೆ.
ಘಟನೆಯನ್ನು ಕಂಡ ನಗರ ಠಾಣೆಯ ಪೋಲೀಸರು ಕಣ್ಣೀರು ಹಾಕಿದರು. ಬಳಿಕ ನಾಯಿಯನ್ನು ವಿಶೇಷ ಗೌರವ ನೀಡಿ ಮಣ್ಣು ಮಾಡಲಾಯಿತು.
ನಾಯಿ ಸತ್ತಂತೆ ಒಂದು ಮಾತಿದೆ ಸಾಮಾನ್ಯ ನಾಯಿಗಳು ಸತ್ತಾಗ ದೊಡ್ಡ ವಿಚಾರವಾಗುವುದಿಲ್ಲ. ಆದರೆ ನಗರ ಪೋಲೀಸ್ ಠಾಣೆಯ ನಾಯಿ ಸತ್ತಾಗ ಪೋಲೀಸರ ಕಣ್ಣು ತೇವವಾಯಿತು. ಹೂ ಮಾಲೆಯೊಂದಿಗೆ ನಾಯಿಯ ಅಂತ್ಯ ಸಂಸ್ಕಾರ ಮಾಡಿದರು. ಅನೇಕ ವರ್ಷಗಳಿಂದ ಈ ನಾಯಿ ಠಾಣೆಯ ಮೆಟ್ಟಿಲ ಮೇಲೆ ಮಲಗುತ್ತಿತ್ತು.
ಠಾಣೆಯೇ ಇದರ ಮನೆಯಾಗಿತ್ತು. ಬಹಳ ಬುದ್ದಿಯ ನಾಯಿಯಾಗಿ ಎಲ್ಲರ ಅಚ್ಚುಮೆಚ್ಚಿನ ಬೊಗ್ಗಿ ಎಂದೇ ಪ್ರಸಿದ್ಷಿಯಾಗಿತ್ತು. ಪೋಲೀಸರಲ್ಲದೆ ಹೊರಗಿನವರು ಯಾರೇ ಅಪರಿಚಿತ ವ್ಯಕ್ತಿ ಗಳು ಬಂದರು ಬೊಗಳುವ ಈ ಬೊಗ್ಗಿ ಇನ್ನಿಲ್ಲ ಎಂದು ಪೋಲೀಸರು ಬೇಸರ ವ್ಯಕ್ತಪಡಿಸುತ್ತಾರೆ.
ಯಾರಿಗೂ ಈ ವರೆಗೆ ಕಚ್ಚಿಲ್ಲ, ಆದರೆ ಅಪರಿಚಿತರು ಯಾರು ಬಂದರೂ ಬಂದಿದ್ದಾರೆ ನೋಡಿ ಬೊಗಳುವ ಮೂಲಕ ಪೋಲೀಸರನ್ನು ಎಚ್ಚರಿಸುವ ಕೆಲಸ ಮಾಡುತ್ತಿತ್ತು.ಒಂದು ದಿನವೂ ಠಾಣೆಯನ್ನು ಬಿಟ್ಟು ಹೊರಗೆ ಹೋಗಿದ್ದಿಲ್ಲ ಎಂದು ಹೇಳುತ್ತಾರೆ. ನಾಯಿಯನ್ನು ಹೂತು ಹಾಕಿದ ಸ್ಥಳದಲ್ಲಿ ನಾಯಿಯ ನೆನಪಿಗೋಸ್ಕರ ಯಾವುದಾದರೂ ಪ್ರಾಣಿಗಳಿಗೆ ಆಹಾರ ನೀಡುವ ಹಣ್ಣಿನ ಮರವೊಂದನ್ನು ನೆಡವ ಸಂಕಲ್ಪವನ್ನು ಪೋಲೀಸರು ಮಾಡಿದ್ದಾರೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…