ಜನ ಮನದ ನಾಡಿ ಮಿಡಿತ

Advertisement

” ಮೇರಾ ಮಿಟ್ಟಿ ಮೇರಾ ದೇಶ್ ” ಅಭಿಯಾನದ ಅಡಿಯಲ್ಲಿ ನೇಜಿ ನೆಡುವ ಕಾರ್ಯಕ್ರಮ

ಮುಲ್ಕಿ: ” ಮೇರಾ ಮಿಟ್ಟಿ ಮೇರಾ ದೇಶ್ ” ಅಭಿಯಾನದ ಅಡಿಯಲ್ಲಿ ಜಿಲ್ಲಾ ಪ್ರಶಸ್ತಿ ಪುರಸ್ಕೃತ ಯುವತಿ ಮಂಡಲ (ರಿ) ಹಳೆಯಂಗಡಿ ಇವರ ವತಿಯಿಂದ ನೇಜಿ ನೆಡುವ ಕಾರ್ಯಕ್ರಮ ನಡೆಯಿತು.

ಜಿಲ್ಲಾ ಪ್ರಶಸ್ತಿ ವಿಜೇತ ಯುವತಿ ಮಂಡಲ ( ರಿ) ಹಳೆಯಂಗಡಿ ಇವರ ಆಶ್ರಯದಲ್ಲಿ ಶ್ರೀ ವಿದ್ಯಾ ವಿನಾಯಕ ಯುವಕ ಮಂಡಲ (ರಿ) ಹಳೆಯಂಗಡಿ ಇವರ ಸಹಕಾರದಲ್ಲಿ ಆದಿತ್ಯವಾರದಂದು ಅಪರಾಹ್ನ 3 ರಿಂದ ಕೋಡಿಹಿತ್ಲು ಗದ್ದೆ 10ನೇ ತೋಕೂರು ಇಲ್ಲಿ ಯುವತಿ ಮಂಡಲದ ಸದಸ್ಯರಿಂದ ‘ಮೇರಾ ಮಿಟ್ಟಿ ಮೇರಾ ದೇಶ್’ ಅಭಿಯಾನದ ಅಡಿಯಲ್ಲಿ ನೇಜಿ ನೆಡುವ ಕಾರ್ಯಕ್ರಮ ಜರಗಿತು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಲಕ್ಷ್ಮಣ್ ಕೋಟ್ಯಾನ್ ಇವರು ಇತ್ತೀಚೆಗೆ ಯುವಕ, ಯುವತಿಯರಲ್ಲಿ ಕೃಷಿ ಆಸಕ್ತಿ ಹೆಚ್ಚುತ್ತಿದ್ದು ಬಹಳ ಸಂತಸದ ವಿಷಯ. ಕೃಷಿಯನ್ನು ಉಳಿಸಿ ಬೆಳೆಸುವ ಮಹತ್ಕಾರ್ಯ ಮುಂದಿನ ದಿನಗಳಲ್ಲಿಯೂ ಕೂಡ ಹಿರಿಯರ ಮಾರ್ಗದರ್ಶನದಲ್ಲಿ ಯುವಕ ಯುವತಿಯರು ನಡೆಸಿಕೊಂಡು ಬರಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಯುವತಿ ಮಂಡಲ ಅಧ್ಯಕ್ಷರಾದ ರಶ್ವಿತಾ, ಪ್ರಧಾನ ಕಾರ್ಯದರ್ಶಿ ದಿವ್ಯಶ್ರೀ ಕೋಟ್ಯಾನ್ ಹಾಗೂ ಸದಸ್ಯರಾದ ಸುಶ್ಮಿತಾ, ಕಾತ್ಯಾಯಿನಿ, ನಿಶ್ಮಿತಾ, ಜಯಶ್ರೀ, ಪ್ರಣವಿ, ಧನ್ಯ, ಶ್ವೇತಾ, ಮೇಘನಾ ಮತ್ತು ನಿತ್ಯಾನಂದ, ಲೋಹಿತ್, ನೀಲೇಶ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!