ಜನ ಮನದ ನಾಡಿ ಮಿಡಿತ

Advertisement

” ಮೇರಾ ಮಿಟ್ಟಿ ಮೇರಾ ದೇಶ್ ” ಅಭಿಯಾನದ ಅಡಿಯಲ್ಲಿ ನೇಜಿ ನೆಡುವ ಕಾರ್ಯಕ್ರಮ

ಮುಲ್ಕಿ: ” ಮೇರಾ ಮಿಟ್ಟಿ ಮೇರಾ ದೇಶ್ ” ಅಭಿಯಾನದ ಅಡಿಯಲ್ಲಿ ಜಿಲ್ಲಾ ಪ್ರಶಸ್ತಿ ಪುರಸ್ಕೃತ ಯುವತಿ ಮಂಡಲ (ರಿ) ಹಳೆಯಂಗಡಿ ಇವರ ವತಿಯಿಂದ ನೇಜಿ ನೆಡುವ ಕಾರ್ಯಕ್ರಮ ನಡೆಯಿತು.

ಜಿಲ್ಲಾ ಪ್ರಶಸ್ತಿ ವಿಜೇತ ಯುವತಿ ಮಂಡಲ ( ರಿ) ಹಳೆಯಂಗಡಿ ಇವರ ಆಶ್ರಯದಲ್ಲಿ ಶ್ರೀ ವಿದ್ಯಾ ವಿನಾಯಕ ಯುವಕ ಮಂಡಲ (ರಿ) ಹಳೆಯಂಗಡಿ ಇವರ ಸಹಕಾರದಲ್ಲಿ ಆದಿತ್ಯವಾರದಂದು ಅಪರಾಹ್ನ 3 ರಿಂದ ಕೋಡಿಹಿತ್ಲು ಗದ್ದೆ 10ನೇ ತೋಕೂರು ಇಲ್ಲಿ ಯುವತಿ ಮಂಡಲದ ಸದಸ್ಯರಿಂದ ‘ಮೇರಾ ಮಿಟ್ಟಿ ಮೇರಾ ದೇಶ್’ ಅಭಿಯಾನದ ಅಡಿಯಲ್ಲಿ ನೇಜಿ ನೆಡುವ ಕಾರ್ಯಕ್ರಮ ಜರಗಿತು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಲಕ್ಷ್ಮಣ್ ಕೋಟ್ಯಾನ್ ಇವರು ಇತ್ತೀಚೆಗೆ ಯುವಕ, ಯುವತಿಯರಲ್ಲಿ ಕೃಷಿ ಆಸಕ್ತಿ ಹೆಚ್ಚುತ್ತಿದ್ದು ಬಹಳ ಸಂತಸದ ವಿಷಯ. ಕೃಷಿಯನ್ನು ಉಳಿಸಿ ಬೆಳೆಸುವ ಮಹತ್ಕಾರ್ಯ ಮುಂದಿನ ದಿನಗಳಲ್ಲಿಯೂ ಕೂಡ ಹಿರಿಯರ ಮಾರ್ಗದರ್ಶನದಲ್ಲಿ ಯುವಕ ಯುವತಿಯರು ನಡೆಸಿಕೊಂಡು ಬರಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಯುವತಿ ಮಂಡಲ ಅಧ್ಯಕ್ಷರಾದ ರಶ್ವಿತಾ, ಪ್ರಧಾನ ಕಾರ್ಯದರ್ಶಿ ದಿವ್ಯಶ್ರೀ ಕೋಟ್ಯಾನ್ ಹಾಗೂ ಸದಸ್ಯರಾದ ಸುಶ್ಮಿತಾ, ಕಾತ್ಯಾಯಿನಿ, ನಿಶ್ಮಿತಾ, ಜಯಶ್ರೀ, ಪ್ರಣವಿ, ಧನ್ಯ, ಶ್ವೇತಾ, ಮೇಘನಾ ಮತ್ತು ನಿತ್ಯಾನಂದ, ಲೋಹಿತ್, ನೀಲೇಶ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!