ಮುಲ್ಕಿ: ” ಮೇರಾ ಮಿಟ್ಟಿ ಮೇರಾ ದೇಶ್ ” ಅಭಿಯಾನದ ಅಡಿಯಲ್ಲಿ ಜಿಲ್ಲಾ ಪ್ರಶಸ್ತಿ ಪುರಸ್ಕೃತ ಯುವತಿ ಮಂಡಲ (ರಿ) ಹಳೆಯಂಗಡಿ ಇವರ ವತಿಯಿಂದ ನೇಜಿ ನೆಡುವ ಕಾರ್ಯಕ್ರಮ ನಡೆಯಿತು.
ಜಿಲ್ಲಾ ಪ್ರಶಸ್ತಿ ವಿಜೇತ ಯುವತಿ ಮಂಡಲ ( ರಿ) ಹಳೆಯಂಗಡಿ ಇವರ ಆಶ್ರಯದಲ್ಲಿ ಶ್ರೀ ವಿದ್ಯಾ ವಿನಾಯಕ ಯುವಕ ಮಂಡಲ (ರಿ) ಹಳೆಯಂಗಡಿ ಇವರ ಸಹಕಾರದಲ್ಲಿ ಆದಿತ್ಯವಾರದಂದು ಅಪರಾಹ್ನ 3 ರಿಂದ ಕೋಡಿಹಿತ್ಲು ಗದ್ದೆ 10ನೇ ತೋಕೂರು ಇಲ್ಲಿ ಯುವತಿ ಮಂಡಲದ ಸದಸ್ಯರಿಂದ ‘ಮೇರಾ ಮಿಟ್ಟಿ ಮೇರಾ ದೇಶ್’ ಅಭಿಯಾನದ ಅಡಿಯಲ್ಲಿ ನೇಜಿ ನೆಡುವ ಕಾರ್ಯಕ್ರಮ ಜರಗಿತು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಲಕ್ಷ್ಮಣ್ ಕೋಟ್ಯಾನ್ ಇವರು ಇತ್ತೀಚೆಗೆ ಯುವಕ, ಯುವತಿಯರಲ್ಲಿ ಕೃಷಿ ಆಸಕ್ತಿ ಹೆಚ್ಚುತ್ತಿದ್ದು ಬಹಳ ಸಂತಸದ ವಿಷಯ. ಕೃಷಿಯನ್ನು ಉಳಿಸಿ ಬೆಳೆಸುವ ಮಹತ್ಕಾರ್ಯ ಮುಂದಿನ ದಿನಗಳಲ್ಲಿಯೂ ಕೂಡ ಹಿರಿಯರ ಮಾರ್ಗದರ್ಶನದಲ್ಲಿ ಯುವಕ ಯುವತಿಯರು ನಡೆಸಿಕೊಂಡು ಬರಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಯುವತಿ ಮಂಡಲ ಅಧ್ಯಕ್ಷರಾದ ರಶ್ವಿತಾ, ಪ್ರಧಾನ ಕಾರ್ಯದರ್ಶಿ ದಿವ್ಯಶ್ರೀ ಕೋಟ್ಯಾನ್ ಹಾಗೂ ಸದಸ್ಯರಾದ ಸುಶ್ಮಿತಾ, ಕಾತ್ಯಾಯಿನಿ, ನಿಶ್ಮಿತಾ, ಜಯಶ್ರೀ, ಪ್ರಣವಿ, ಧನ್ಯ, ಶ್ವೇತಾ, ಮೇಘನಾ ಮತ್ತು ನಿತ್ಯಾನಂದ, ಲೋಹಿತ್, ನೀಲೇಶ್ ಉಪಸ್ಥಿತರಿದ್ದರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…