ಮುಲ್ಕಿ: ” ಮೇರಾ ಮಿಟ್ಟಿ ಮೇರಾ ದೇಶ್ ” ಅಭಿಯಾನದ ಅಡಿಯಲ್ಲಿ ಜಿಲ್ಲಾ ಪ್ರಶಸ್ತಿ ಪುರಸ್ಕೃತ ಯುವತಿ ಮಂಡಲ (ರಿ) ಹಳೆಯಂಗಡಿ ಇವರ ವತಿಯಿಂದ ನೇಜಿ ನೆಡುವ ಕಾರ್ಯಕ್ರಮ ನಡೆಯಿತು.
ಜಿಲ್ಲಾ ಪ್ರಶಸ್ತಿ ವಿಜೇತ ಯುವತಿ ಮಂಡಲ ( ರಿ) ಹಳೆಯಂಗಡಿ ಇವರ ಆಶ್ರಯದಲ್ಲಿ ಶ್ರೀ ವಿದ್ಯಾ ವಿನಾಯಕ ಯುವಕ ಮಂಡಲ (ರಿ) ಹಳೆಯಂಗಡಿ ಇವರ ಸಹಕಾರದಲ್ಲಿ ಆದಿತ್ಯವಾರದಂದು ಅಪರಾಹ್ನ 3 ರಿಂದ ಕೋಡಿಹಿತ್ಲು ಗದ್ದೆ 10ನೇ ತೋಕೂರು ಇಲ್ಲಿ ಯುವತಿ ಮಂಡಲದ ಸದಸ್ಯರಿಂದ ‘ಮೇರಾ ಮಿಟ್ಟಿ ಮೇರಾ ದೇಶ್’ ಅಭಿಯಾನದ ಅಡಿಯಲ್ಲಿ ನೇಜಿ ನೆಡುವ ಕಾರ್ಯಕ್ರಮ ಜರಗಿತು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಲಕ್ಷ್ಮಣ್ ಕೋಟ್ಯಾನ್ ಇವರು ಇತ್ತೀಚೆಗೆ ಯುವಕ, ಯುವತಿಯರಲ್ಲಿ ಕೃಷಿ ಆಸಕ್ತಿ ಹೆಚ್ಚುತ್ತಿದ್ದು ಬಹಳ ಸಂತಸದ ವಿಷಯ. ಕೃಷಿಯನ್ನು ಉಳಿಸಿ ಬೆಳೆಸುವ ಮಹತ್ಕಾರ್ಯ ಮುಂದಿನ ದಿನಗಳಲ್ಲಿಯೂ ಕೂಡ ಹಿರಿಯರ ಮಾರ್ಗದರ್ಶನದಲ್ಲಿ ಯುವಕ ಯುವತಿಯರು ನಡೆಸಿಕೊಂಡು ಬರಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಯುವತಿ ಮಂಡಲ ಅಧ್ಯಕ್ಷರಾದ ರಶ್ವಿತಾ, ಪ್ರಧಾನ ಕಾರ್ಯದರ್ಶಿ ದಿವ್ಯಶ್ರೀ ಕೋಟ್ಯಾನ್ ಹಾಗೂ ಸದಸ್ಯರಾದ ಸುಶ್ಮಿತಾ, ಕಾತ್ಯಾಯಿನಿ, ನಿಶ್ಮಿತಾ, ಜಯಶ್ರೀ, ಪ್ರಣವಿ, ಧನ್ಯ, ಶ್ವೇತಾ, ಮೇಘನಾ ಮತ್ತು ನಿತ್ಯಾನಂದ, ಲೋಹಿತ್, ನೀಲೇಶ್ ಉಪಸ್ಥಿತರಿದ್ದರು.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…