ಜನ ಮನದ ನಾಡಿ ಮಿಡಿತ

Advertisement

ಸೌಜನ್ಯಾ ಪ್ರಕರಣ; ಚಲೋ ಬೆಳ್ತಂಗಡಿ ಧರಣಿ..!

ಬೆಳ್ತಂಗಡಿ; ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣ ಸಂಬ0ಧ ಪ್ರತಿಭಟನೆಗೆ ಇಳಿಯುವ ಬದಲು ಬಿಜೆಪಿಗರು ಪ್ರಕರಣದ ಮರು ತನಿಖೆಗೆ ಕೇಂದ್ರ ಸರಕಾರವನ್ನು ಆಗ್ರಹಿಸಲಿ ಎಂದು ಮಾಜಿ ಶಾಸಕ ಕೆ. ವಸಂತ ಬಂಗೇರ ಹೇಳಿದ್ದಾರೆ.


ಇವರು ರಾಜ್ಯ ಜನಪರ ಸಂಘಟನೆಗಳ ವೇದಿಕೆ ದ.ಕ. ಜಿಲ್ಲಾ ಸಮಿತಿ ನೇತೃತ್ವದಲ್ಲಿ ಬೆಳ್ತಂಗಡಿ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ನಡೆದ ರಾಜ್ಯ ಮಟ್ಟದ ಚಲೋ ಬೆಳ್ತಂಗಡಿ ಧರಣಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅಂದು ಕೇಂದ್ರ ಹಾಗೂ ರಾಜ್ಯ ದಲ್ಲಿದ್ದ ಬಿಜೆಪಿ ಸರಕಾರಗಳು ನಿರಪರಾಧಿಯನ್ನು ಅಪರಾಧಿಯೆಂದು ಬಿಂಬಿಸಿ ತನಿಖೆಯ ದಾರಿ ತಪ್ಪಿಸಿದವು. ಈಗ ಪ್ರತಿಭಟನೆ ನಡೆಸುವುದನ್ನು ಬಿಟ್ಟು ಮರು ತನಿಖೆಗೆ ತಮ್ಮದೇ ಸರಕಾರದ ಮೇಲೆ ಒತ್ತಡ ಹೇರಲಿ ಎಂದರು.


ಇನ್ನೂ ಇದೇ ವೇಳೆ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮಾತನಾಡಿ, ಸೌಜನ್ಯಾ ಪ್ರಕರಣ ನ್ಯಾಯಾಂಗ ಸುಪರ್ದಿಯಲ್ಲೇ ತನಿಖೆಯಾಗಬೇಕು ಎಂದರು.

ರಾಜ್ಯ ಜನಪರ ಸಂಘಟನೆಗಳ ವೇದಿಕೆ ಸಂಚಾಲಕ ಬಿ.ಎಂ. ಭಟ್ ಮಾತನಾಡಿ, ಸಿಬಿಐ ಕೋರ್ಟ್ ತನಿಖೆ ಯಲ್ಲಿನ ಲೋಪಗಳನ್ನು ಉಲ್ಲೇಖ ಮಾಡಿದೆ. ಸಂಸದರು ಲೋಕಸಭೆಯಲ್ಲಿ ಈ ಬಗ್ಗೆ ಧ್ವನಿ ಎತ್ತಬೇಕೇ ಹೊರತು ಪ್ರತಿಭಟನೆಯಲ್ಲಿ ಅಲ್ಲ ಎಂದರು.

ಇನ್ನೂ ಈ ಸಂದರ್ಭದಲ್ಲಿ ಜನವಾದಿ ಮಹಿಳಾ ವೇದಿಕೆ ರಾಜ್ಯಾಧ್ಯಕ್ಷೆ ಡಾ| ಮೀನಾಕ್ಷಿ ಬಾಳಿ, ಉಪಾಧ್ಯಕ್ಷೆ ನೀಲಾ, ಸೌಜನ್ಯಾ ತಾಯಿ ಕುಸುಮಾವತಿ, ಪ್ರೊ| ನರೇಂದ್ರ ಎಲ್. ನಾಯಕ್, ರೈತ ಸಂಘದ ರಾಜ್ಯ ಕಾರ್ಯದರ್ಶಿ ರವಿಕಿರಣ ಪುಣಚ, ಹೋರಾಟಗಾರ್ತಿ ಕೆ.ಎಸ್.ವಿಮಲಾ, ವಕೀಲ ಶ್ರೀನಿವಾಸ್, ಕಾಂಗ್ರೆಸ್‌ನ ಶ್ಯಾಲೆಟ್, ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಯಾದವ ಶೆಟ್ಟಿ, ಸಿಪಿಐ ಜಿಲ್ಲಾ ಕಾರ್ಯದರ್ಶಿ ಶೇಖರ್ ಮತ್ತಿತರರು ಮರು ತನಿಖೆಗೆ ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!