ಜನ ಮನದ ನಾಡಿ ಮಿಡಿತ

Advertisement

ಬರೋಬ್ಬರಿ 174 ಕಿ.ಮೀ ರಿವರ್ಸ್ ಟ್ರ‍್ಯಾಕ್ಟರ್ ಓಡಿಸಿದ ಯುವಕ; ಭಕ್ತಿ ಅಂದರೆ ಇದಪ್ಪಾ ಶಹಬ್ಬಾಷ್.. ಎಂದ ನೆಟ್ಟಿಗರು

ಸಾಮಾನ್ಯವಾಗಿ ಭಕ್ತರು ದೇವರಿಗೆ ಹಲವು ರೀತಿಯಲ್ಲಿ ಹರಕೆ ಕಟ್ಟಿಕೊಂಡಿರುತ್ತಾರೆ. ಕೆಲವರು ಹಣದ ರೂಪದಲ್ಲಿ ಕೊಟ್ಟರೆ, ಇನ್ನು ಕೆಲವರು ದವಸ-ಧಾನ್ಯ ರೂಪದಲ್ಲಿ ಹರಕೆ ನೀಡುತ್ತಾರೆ. ಆದರೆ ಇಲ್ಲೊಬ್ಬ ಯುವಕ ದೇವರಿಗೆ ರಿವರ್ಸ್ ಟ್ರ‍್ಯಾಕ್ಟರ್ ಓಡಿಸುವ ಹರಕೆ ಕಟ್ಟಿಕೊಂಡಿದ್ದು, ಇದೀಗ ಅದರಂತೆಯೇ ಈ ಹರಕೆಯನ್ನು ಮಾಡಿ ತೀರಿಸಿದ್ದಾನೆ.

ಹೌದು. 25 ವರ್ಷದ ಶಿವನಗೌಡ ಪಾಟೀಲ್ ಎಂಬ ಯುವಕ ಉಳುವಿ ಚನ್ನಬಸವೇಶ್ವರ ದೇವರಿಗೆ ಹರಕೆ ಐದು ವರ್ಷದ ಹಿಂದೆಯೇ ಈ ಹರಕೆಯನ್ನು ಕಟ್ಟಿಕೊಂಡಿದ್ದನು. ಅದರಂತೆಯೇ ನಿನ್ನೆ ದೇವರಿಗೆ ಹರಕೆ ಈಡೇರಿಸಿದ್ದಾನೆ.
16 ತಾಸಿನಲ್ಲಿ 174 ಕಿಮೀ ರಿವರ್ಸ್ ಟ್ರ‍್ಯಾಕ್ಟರ್ ಚಲಾಯಿಸುವ ಮೂಲಕಜ ಎಲ್ಲರನ್ನು ಬೆರಗುಗೊಳಿಸಿದ್ದಾನೆ.

ಶಿವನಗೌಡ ಪಾಟೀಲ್ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಕನ್ನೂರು ಗ್ರಾಮದಿಂದ ಉಳುವಿಗೆ ರಿವರ್ಸ್ ಟ್ರ‍್ಯಾಕ್ಟರ್ ಚಲಾಯಿಸಿಕೊಂಡು ಹೋಗಿದ್ದಾನೆ. ಹಗಲು ರಾತ್ರಿ ಎನ್ನದ ಸತತವಾಗಿ ಹಿಂಬದಿಯಿAದ ಡ್ರೈವಿಂಗ್ ಮಾಡಿ ಸಾಹಸ ಮೆರೆದಿದ್ದಾನೆ.

ಟ್ರ‍್ಯಾಕ್ಟರ್ ಎಂಜಿನ್ ಚಲಾಯಿಸುವುದೇ ಕಷ್ಟಕರ ಅಂತದ್ರಲ್ಲಿ ಟೇಲರ್ ಸಮೇತ ಪ್ರಯಾಣ ಮಾಡಿದ್ದಾನೆ. ಯುವಕನ ಈ ದಿಟ್ಟ ಸಾಹಸಕ್ಕೆ ಊರಿನ ಹಾಗೂ ತಾಲೂಕಿನ ಜನರು ಫಿದಾ ಆಗಿದ್ದಾರೆ. ಶಹಬ್ಬಾಷ್ ಇದಪ್ಪಾ ಭಕ್ತಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!