ಸಾಮಾನ್ಯವಾಗಿ ಭಕ್ತರು ದೇವರಿಗೆ ಹಲವು ರೀತಿಯಲ್ಲಿ ಹರಕೆ ಕಟ್ಟಿಕೊಂಡಿರುತ್ತಾರೆ. ಕೆಲವರು ಹಣದ ರೂಪದಲ್ಲಿ ಕೊಟ್ಟರೆ, ಇನ್ನು ಕೆಲವರು ದವಸ-ಧಾನ್ಯ ರೂಪದಲ್ಲಿ ಹರಕೆ ನೀಡುತ್ತಾರೆ. ಆದರೆ ಇಲ್ಲೊಬ್ಬ ಯುವಕ ದೇವರಿಗೆ ರಿವರ್ಸ್ ಟ್ರ್ಯಾಕ್ಟರ್ ಓಡಿಸುವ ಹರಕೆ ಕಟ್ಟಿಕೊಂಡಿದ್ದು, ಇದೀಗ ಅದರಂತೆಯೇ ಈ ಹರಕೆಯನ್ನು ಮಾಡಿ ತೀರಿಸಿದ್ದಾನೆ.
ಹೌದು. 25 ವರ್ಷದ ಶಿವನಗೌಡ ಪಾಟೀಲ್ ಎಂಬ ಯುವಕ ಉಳುವಿ ಚನ್ನಬಸವೇಶ್ವರ ದೇವರಿಗೆ ಹರಕೆ ಐದು ವರ್ಷದ ಹಿಂದೆಯೇ ಈ ಹರಕೆಯನ್ನು ಕಟ್ಟಿಕೊಂಡಿದ್ದನು. ಅದರಂತೆಯೇ ನಿನ್ನೆ ದೇವರಿಗೆ ಹರಕೆ ಈಡೇರಿಸಿದ್ದಾನೆ.
16 ತಾಸಿನಲ್ಲಿ 174 ಕಿಮೀ ರಿವರ್ಸ್ ಟ್ರ್ಯಾಕ್ಟರ್ ಚಲಾಯಿಸುವ ಮೂಲಕಜ ಎಲ್ಲರನ್ನು ಬೆರಗುಗೊಳಿಸಿದ್ದಾನೆ.
ಶಿವನಗೌಡ ಪಾಟೀಲ್ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಕನ್ನೂರು ಗ್ರಾಮದಿಂದ ಉಳುವಿಗೆ ರಿವರ್ಸ್ ಟ್ರ್ಯಾಕ್ಟರ್ ಚಲಾಯಿಸಿಕೊಂಡು ಹೋಗಿದ್ದಾನೆ. ಹಗಲು ರಾತ್ರಿ ಎನ್ನದ ಸತತವಾಗಿ ಹಿಂಬದಿಯಿAದ ಡ್ರೈವಿಂಗ್ ಮಾಡಿ ಸಾಹಸ ಮೆರೆದಿದ್ದಾನೆ.
ಟ್ರ್ಯಾಕ್ಟರ್ ಎಂಜಿನ್ ಚಲಾಯಿಸುವುದೇ ಕಷ್ಟಕರ ಅಂತದ್ರಲ್ಲಿ ಟೇಲರ್ ಸಮೇತ ಪ್ರಯಾಣ ಮಾಡಿದ್ದಾನೆ. ಯುವಕನ ಈ ದಿಟ್ಟ ಸಾಹಸಕ್ಕೆ ಊರಿನ ಹಾಗೂ ತಾಲೂಕಿನ ಜನರು ಫಿದಾ ಆಗಿದ್ದಾರೆ. ಶಹಬ್ಬಾಷ್ ಇದಪ್ಪಾ ಭಕ್ತಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…