ಸಾಮಾನ್ಯವಾಗಿ ಭಕ್ತರು ದೇವರಿಗೆ ಹಲವು ರೀತಿಯಲ್ಲಿ ಹರಕೆ ಕಟ್ಟಿಕೊಂಡಿರುತ್ತಾರೆ. ಕೆಲವರು ಹಣದ ರೂಪದಲ್ಲಿ ಕೊಟ್ಟರೆ, ಇನ್ನು ಕೆಲವರು ದವಸ-ಧಾನ್ಯ ರೂಪದಲ್ಲಿ ಹರಕೆ ನೀಡುತ್ತಾರೆ. ಆದರೆ ಇಲ್ಲೊಬ್ಬ ಯುವಕ ದೇವರಿಗೆ ರಿವರ್ಸ್ ಟ್ರ್ಯಾಕ್ಟರ್ ಓಡಿಸುವ ಹರಕೆ ಕಟ್ಟಿಕೊಂಡಿದ್ದು, ಇದೀಗ ಅದರಂತೆಯೇ ಈ ಹರಕೆಯನ್ನು ಮಾಡಿ ತೀರಿಸಿದ್ದಾನೆ.
ಹೌದು. 25 ವರ್ಷದ ಶಿವನಗೌಡ ಪಾಟೀಲ್ ಎಂಬ ಯುವಕ ಉಳುವಿ ಚನ್ನಬಸವೇಶ್ವರ ದೇವರಿಗೆ ಹರಕೆ ಐದು ವರ್ಷದ ಹಿಂದೆಯೇ ಈ ಹರಕೆಯನ್ನು ಕಟ್ಟಿಕೊಂಡಿದ್ದನು. ಅದರಂತೆಯೇ ನಿನ್ನೆ ದೇವರಿಗೆ ಹರಕೆ ಈಡೇರಿಸಿದ್ದಾನೆ.
16 ತಾಸಿನಲ್ಲಿ 174 ಕಿಮೀ ರಿವರ್ಸ್ ಟ್ರ್ಯಾಕ್ಟರ್ ಚಲಾಯಿಸುವ ಮೂಲಕಜ ಎಲ್ಲರನ್ನು ಬೆರಗುಗೊಳಿಸಿದ್ದಾನೆ.
ಶಿವನಗೌಡ ಪಾಟೀಲ್ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಕನ್ನೂರು ಗ್ರಾಮದಿಂದ ಉಳುವಿಗೆ ರಿವರ್ಸ್ ಟ್ರ್ಯಾಕ್ಟರ್ ಚಲಾಯಿಸಿಕೊಂಡು ಹೋಗಿದ್ದಾನೆ. ಹಗಲು ರಾತ್ರಿ ಎನ್ನದ ಸತತವಾಗಿ ಹಿಂಬದಿಯಿAದ ಡ್ರೈವಿಂಗ್ ಮಾಡಿ ಸಾಹಸ ಮೆರೆದಿದ್ದಾನೆ.
ಟ್ರ್ಯಾಕ್ಟರ್ ಎಂಜಿನ್ ಚಲಾಯಿಸುವುದೇ ಕಷ್ಟಕರ ಅಂತದ್ರಲ್ಲಿ ಟೇಲರ್ ಸಮೇತ ಪ್ರಯಾಣ ಮಾಡಿದ್ದಾನೆ. ಯುವಕನ ಈ ದಿಟ್ಟ ಸಾಹಸಕ್ಕೆ ಊರಿನ ಹಾಗೂ ತಾಲೂಕಿನ ಜನರು ಫಿದಾ ಆಗಿದ್ದಾರೆ. ಶಹಬ್ಬಾಷ್ ಇದಪ್ಪಾ ಭಕ್ತಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…