ಜನ ಮನದ ನಾಡಿ ಮಿಡಿತ

Advertisement

ತಾಳಿ ಕಟ್ಟಿದ್ದ ಗಂಡನಿಗೆ ಮುಹೂರ್ತ ಇಟ್ಟ ಜಯಕ್ಕನ ಲವ್​ ಸ್ಟೋರಿ….

ವಿಜಯಪುರ ಜಿಲ್ಲೆಯ ಬಸವನಬಾಗೇಬಾಡಿಯಲ್ಲಿ ಕಳೆದ ಐದು ತಿಂಗಳ ಹಿಂದೆ ಜಕರಾಯ್ ದಳವಾಯಿ ನಾಪತ್ತೆ ಆಗಿದ್ದಾನೆ ಎಂದು ಪ್ರಕರಣ ದಾಖಲಾಗಿತ್ತು.

ಜಕರಾಯನ ಪತ್ನಿ ಇಂಗಳೇಶ್ವರ ರಸ್ತೆಯ ಬಳಿ ಜಕರಾಯ್ ಜಯಶ್ರೀ ನಡುವಳಿಕೆ ಅನುಮಾನ ಜೊತೆಗೆ ಇವರ ಮಗಳ ಕೆಲವೊಂದು ಮಾಹಿತಿ ಮೇರೆಗೆ ಪೊಲೀಸರು ಪ್ರಕರಣ ಬೆನ್ನತ್ತಿದ್ದಾಗ, ಅನೈತಿಕ ಸಂಬಂಧ ಹಿನ್ನಲೆಯಲ್ಲಿ ಪ್ರಿಯಕರನೊಂದಿಗಿನ ಸೇರಿ ಗಂಡನಿಗೆ ಸ್ಕೆಚ್ ಹಾಕಿರೋದು ಬೆಳಕಿಗೆ ಬಂದಿದೆ.

ಜಕರಾಯ್‌ನನ್ನು ಕೊಡಲಿಯಿಂದ ಕೊಲೆಗೈದು ಮೃತದೇಹ ಸುಟ್ಟು ಯಾರಿಗೂ ಅನುಮಾನ ಬಾರದ ರೀತಿಯಲ್ಲಿದ್ರು. ನಾಪತ್ತೆ ಆಗಿದ್ದಾನೆ ಅಂತ ಬಿಂಬಿಸಿದ್ದರು. ಪತ್ನಿ ಜಯಶ್ರೀ ದಳವಾಯಿ ಹಾಗೂ ಡೋಂಗ್ರಿಸಾಬ್ ಬೊಮ್ಮನಳ್ಳಿ ಮಧ್ಯೆ ಅನೈತಿಕ ಸಂಬಂಧ ಜಕರಾಯನಿಗೆ ಗೊತ್ತಾಗಿತ್ತು. ಈ ಹಿನ್ನೆಲೆಯಲ್ಲಿ ಡೋಂಗ್ರಿಸಾಬನೊಂದಿಗೆ ಜಗಳಾಡಿದ್ದನು. ಪತ್ನಿ ಜಯಶ್ರೀ ಹಾಗೂ ಪ್ರಿಯಕರ ಸೇರಿ ಕೊಲೆ ಮಾಡುವ ಪ್ಲಾನ್ ಮಾಡಿಕೊಂಡು ಹತ್ಯೆ ಮಾಡಿದ್ದಾರೆ.

ಜಯಶ್ರೀ ಮದುವೆ ಮತ್ತಿತರ ಕಾರ್ಯಕ್ರಮಗಳಿಗೆ ಅಡುಗೆ ಮಾಡಲು ಹೋಗ್ತಿದ್ದಳು ಈ ವೇಳೆ ಅಲ್ಲೇ ಕೆಲಸ ಮಾಡ್ತಿದ್ದ ಡೋಂಗ್ರಿಸಾಬ ಪರಿಚಯವಾಗಿ ಇವರಿಬ್ಬರ ಮಧ್ಯೆ ಲವ್ ಶುರುವಾಗಿತ್ತು. ಕಳೆದ ಮೂರು ವರ್ಷಗಳಿಂದ ಇಬ್ಬರು ಪ್ರೀತಿಸುತ್ತಿದ್ದರು.

ಇನ್ನು ಜಕರಾಯನ್ನು ಕೊಡಲಿಯಿಂದ ಹೊಡೆದು ಬರ್ಬರವಾಗಿ ಹತ್ಯೆಗೈದು, ಸಾಕ್ಷಿ ನಾಶ ಪಡಿಸುವ ಉದ್ದೇಶದಿಂದ ಶವವನ್ನು ಬೈಕ್‌ನಲ್ಲಿ ತೆಗೆದುಕೊಂಡು ಹೋಗಿ ಬಾವಿಯೊಂದರ ಬಳಿ ಅರ್ಧ ಮರ್ಧ ಸುಟ್ಟು ಪರಾರಿಯಾಗಿದ್ದರು. ಅಲ್ಲದೇ, ದೇಹ ಸುಟ್ಟಿರುವ ಜಾಗದ ಪಕ್ಕದಲ್ಲಿರುವ ಬಾವಿಯಲ್ಲಿ ಎಸೆದು ಎಸ್ಕೇಪ್ ಆಗಿದ್ದರು.‌ ಅಲ್ಲದೇ, ಮೃತನ ಎಟಿಎಂ ಕಾರ್ಡ್, ಬೈಕ್ ಲೈಸನ್ಸ್, ಪ್ಯಾನ್‌ಕಾರ್ಡ್, ಹತ್ಯೆಗೆ ಬಳಸಿದ ಕೊಡಲಿ ಬಾವಿಯಲ್ಲಿ ಎಸೆದಿದ್ದರು. ವಿಜಯಪುರ ಎಸ್ಪಿ ಹೆಚ್ ಡಿ ಆನಂದಕುಮಾರ್ ವಿಶೇಷ ತಂಡ ರಚಿಸಿದ್ದರು. ಇದೀಗ ಆರೋಪಿಗಳಿಬ್ಬರನ್ನು ಬಂಧಿಸಿ, ನ್ಯಾಯಾಲಯಕ್ಕೊಪ್ಪಿಸಿದ್ದಾರೆ..

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!