ವಿಜಯಪುರ ಜಿಲ್ಲೆಯ ಬಸವನಬಾಗೇಬಾಡಿಯಲ್ಲಿ ಕಳೆದ ಐದು ತಿಂಗಳ ಹಿಂದೆ ಜಕರಾಯ್ ದಳವಾಯಿ ನಾಪತ್ತೆ ಆಗಿದ್ದಾನೆ ಎಂದು ಪ್ರಕರಣ ದಾಖಲಾಗಿತ್ತು.
ಜಕರಾಯನ ಪತ್ನಿ ಇಂಗಳೇಶ್ವರ ರಸ್ತೆಯ ಬಳಿ ಜಕರಾಯ್ ಜಯಶ್ರೀ ನಡುವಳಿಕೆ ಅನುಮಾನ ಜೊತೆಗೆ ಇವರ ಮಗಳ ಕೆಲವೊಂದು ಮಾಹಿತಿ ಮೇರೆಗೆ ಪೊಲೀಸರು ಪ್ರಕರಣ ಬೆನ್ನತ್ತಿದ್ದಾಗ, ಅನೈತಿಕ ಸಂಬಂಧ ಹಿನ್ನಲೆಯಲ್ಲಿ ಪ್ರಿಯಕರನೊಂದಿಗಿನ ಸೇರಿ ಗಂಡನಿಗೆ ಸ್ಕೆಚ್ ಹಾಕಿರೋದು ಬೆಳಕಿಗೆ ಬಂದಿದೆ.
ಜಕರಾಯ್ನನ್ನು ಕೊಡಲಿಯಿಂದ ಕೊಲೆಗೈದು ಮೃತದೇಹ ಸುಟ್ಟು ಯಾರಿಗೂ ಅನುಮಾನ ಬಾರದ ರೀತಿಯಲ್ಲಿದ್ರು. ನಾಪತ್ತೆ ಆಗಿದ್ದಾನೆ ಅಂತ ಬಿಂಬಿಸಿದ್ದರು. ಪತ್ನಿ ಜಯಶ್ರೀ ದಳವಾಯಿ ಹಾಗೂ ಡೋಂಗ್ರಿಸಾಬ್ ಬೊಮ್ಮನಳ್ಳಿ ಮಧ್ಯೆ ಅನೈತಿಕ ಸಂಬಂಧ ಜಕರಾಯನಿಗೆ ಗೊತ್ತಾಗಿತ್ತು. ಈ ಹಿನ್ನೆಲೆಯಲ್ಲಿ ಡೋಂಗ್ರಿಸಾಬನೊಂದಿಗೆ ಜಗಳಾಡಿದ್ದನು. ಪತ್ನಿ ಜಯಶ್ರೀ ಹಾಗೂ ಪ್ರಿಯಕರ ಸೇರಿ ಕೊಲೆ ಮಾಡುವ ಪ್ಲಾನ್ ಮಾಡಿಕೊಂಡು ಹತ್ಯೆ ಮಾಡಿದ್ದಾರೆ.
ಜಯಶ್ರೀ ಮದುವೆ ಮತ್ತಿತರ ಕಾರ್ಯಕ್ರಮಗಳಿಗೆ ಅಡುಗೆ ಮಾಡಲು ಹೋಗ್ತಿದ್ದಳು ಈ ವೇಳೆ ಅಲ್ಲೇ ಕೆಲಸ ಮಾಡ್ತಿದ್ದ ಡೋಂಗ್ರಿಸಾಬ ಪರಿಚಯವಾಗಿ ಇವರಿಬ್ಬರ ಮಧ್ಯೆ ಲವ್ ಶುರುವಾಗಿತ್ತು. ಕಳೆದ ಮೂರು ವರ್ಷಗಳಿಂದ ಇಬ್ಬರು ಪ್ರೀತಿಸುತ್ತಿದ್ದರು.
ಇನ್ನು ಜಕರಾಯನ್ನು ಕೊಡಲಿಯಿಂದ ಹೊಡೆದು ಬರ್ಬರವಾಗಿ ಹತ್ಯೆಗೈದು, ಸಾಕ್ಷಿ ನಾಶ ಪಡಿಸುವ ಉದ್ದೇಶದಿಂದ ಶವವನ್ನು ಬೈಕ್ನಲ್ಲಿ ತೆಗೆದುಕೊಂಡು ಹೋಗಿ ಬಾವಿಯೊಂದರ ಬಳಿ ಅರ್ಧ ಮರ್ಧ ಸುಟ್ಟು ಪರಾರಿಯಾಗಿದ್ದರು. ಅಲ್ಲದೇ, ದೇಹ ಸುಟ್ಟಿರುವ ಜಾಗದ ಪಕ್ಕದಲ್ಲಿರುವ ಬಾವಿಯಲ್ಲಿ ಎಸೆದು ಎಸ್ಕೇಪ್ ಆಗಿದ್ದರು. ಅಲ್ಲದೇ, ಮೃತನ ಎಟಿಎಂ ಕಾರ್ಡ್, ಬೈಕ್ ಲೈಸನ್ಸ್, ಪ್ಯಾನ್ಕಾರ್ಡ್, ಹತ್ಯೆಗೆ ಬಳಸಿದ ಕೊಡಲಿ ಬಾವಿಯಲ್ಲಿ ಎಸೆದಿದ್ದರು. ವಿಜಯಪುರ ಎಸ್ಪಿ ಹೆಚ್ ಡಿ ಆನಂದಕುಮಾರ್ ವಿಶೇಷ ತಂಡ ರಚಿಸಿದ್ದರು. ಇದೀಗ ಆರೋಪಿಗಳಿಬ್ಬರನ್ನು ಬಂಧಿಸಿ, ನ್ಯಾಯಾಲಯಕ್ಕೊಪ್ಪಿಸಿದ್ದಾರೆ..
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…