ಜನ ಮನದ ನಾಡಿ ಮಿಡಿತ

Advertisement

ದಿವಂಗತ ಎನ್.ಟಿ. ರಾಮರಾವ್ ಅವರ 100ನೇ ಜನ್ಮ ಶತಮಾನೋತ್ಸವ; 100 ರೂಪಾಯಿಯ ವಿಶೇಷ ನಾಣ್ಯ ಬಿಡುಗಡೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ದಿಗ್ಗಜ ನಟ, ತೆಲುಗು ದೇಶಂ ಸಂಸ್ಥಾಪಕ ದಿವಂಗತ ಎನ್.ಟಿ. ರಾಮರಾವ್ ಅವರ 100ನೇ ಜನ್ಮ ಶತಮಾನೋತ್ಸವಕ್ಕಾಗಿ 100 ರೂಪಾಯಿ ಮುಖಬೆಲೆಯ ನಾಣ್ಯ ಬಿಡುಗಡೆ ಮಾಡಲಾಗಿದೆ.

ನವದೆಹಲಿಯ ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು 100ರ ನಾಣ್ಯ ಬಿಡುಗಡೆಗೊಳಿಸಿದರು.

ಸಮಾರಂಭದಲ್ಲಿ ನಂದಮೂರಿ ಬಾಲಕೃಷ್ಣ, ರಾಮಕೃಷ್ಣ, ಭುವನೇಶ್ವರಿ, ಪುರಂದರೇಶ್ವರಿ ಸೇರಿದಂತೆ ಎನ್‌ಟಿ ರಾಮರಾವ್ ಅವರ ಪುತ್ರರು ಮತ್ತು ಪುತ್ರಿಯರು ಸೇರಿ ಕುಟುಂಬದ ಇತರ ಸದಸ್ಯರೂ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಟಿಡಿಪಿ ಅಧ್ಯಕ್ಷ ನಾರಾ ಚಂದ್ರಬಾಬು ನಾಯ್ಡು ಕೂಡ ಭಾಗಿಯಾಗಿದ್ದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಬಿಜೆಪಿ ನಾಯಕರು ಮತ್ತು ಹಲವು ಟಿಡಿಪಿ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇನ್ನು ಎನ್​ಟಿಆರ್​ ಸ್ಮರಣಾರ್ಥ ಹೈದರಾಬಾದ್​​ನಲ್ಲಿರುವ ಭಾರತ ಸರ್ಕಾರದ ಟಂಕಸಾಲೆಯಲ್ಲಿ ಮುದ್ರಿಸಲಾಯಿತು. ಕೇಂದ್ರ ಹಣಕಾಸು ಸಚಿವಾಲಯದ ನಿರ್ದೇಶನದ ಮೇರೆಗೆ ಮುದ್ರಿಸಲಾಗಿದೆ.

ಅಂದಹಾಗೆಯೇ, 100 ರೂಪಾಯಿ ವಿಶೇಷ ನಾಣ್ಯವನ್ನು ಮಾರುಕಟ್ಟೆಯಲ್ಲಿ ವಹಿವಾಟು ನಡೆಸಲು ಮುದ್ರಿಸಿಲ್ಲ. ಎನ್​ಟಿಆರ್​​ ಅವರಿಗೆ ಗೌರವ ಸೂಚಿಸುವ ಸಲುವಾಗಿ ಬಿಡುಗಡೆ ಮಾಡಲಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!