ಜನ ಮನದ ನಾಡಿ ಮಿಡಿತ

Advertisement

ದ್ವಿಚಕ್ರ ,ತ್ರಿಚಕ್ರ ವಾಹನಗಳ ಬಿಡಿಭಾಗಗಳ ದಾಸ್ತಾನು ಹಾಗೂ ವ್ಯಾಪಾರ ಮಳಿಗೆಯಿಂದ 39,370 ರೂ. ನಗದು, 4 ಮೊಬೈಲ್ ಫೋನ್ ಕಳವು

ಮಂಗಳೂರು; ಬಂದರ್‌ನ ಅಜೀಜುದ್ದೀನ್ ರಸ್ತೆಯಲ್ಲಿ ಮೊಹಮ್ಮದ್ ಮುದಸ್ಸಿರ್ ಅವರಿಗೆ ಸೇರಿದ ಟಿ.ವಿ.ಎಸ್. ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳ ಬಿಡಿಭಾಗಗಳ ದಾಸ್ತಾನು ಹಾಗೂ ವ್ಯಾಪಾರ ಮಳಿಗೆಯಿಂದ 39,370 ರೂ. ನಗದು, 4 ಮೊಬೈಲ್ ಫೋನ್ ಮತ್ತು ಚಾರ್ಜರ್ ಹಾಗೂ ಇಂಟರ್‌ನೆಟ್ ಮೋಡೆಮ್ ಕಳವಾಗಿದೆ.


ಆ. 26ರಂದು ಸಂಜೆ 6.30ಕ್ಕೆ ಮಳಿಗೆಯನ್ನು ಮುಚ್ಚಿ ಹೋಗಿದ್ದು, 27ರಂದು ರವಿವಾರವಾದ್ದರಿಂದ ಮಳಿಗೆ ತೆರೆದಿರಲಿಲ್ಲ. 28ರಂದು 9ಗಂಟೆಗೆ ಮಳಿಗೆ ತೆರೆದು ನಗದು ಕೌಂಟರಿಗೆ ಹೋದಾಗ ಕೌಂಟರಿನ ಹಣ ಇಡುವ ಡ್ರಾವರ್ ಬೀಗ ತೆರೆದ ಸ್ಥಿತಿಯಲ್ಲಿತ್ತು. ಮ್ಯಾನೇಜರ್‌ಗೆ ಕರೆ ಮಾಡಿ ವಿಚಾರ ತಿಳಿಸಿದ್ದು, ಅವರು ಸ್ಥಳಕ್ಕೆ ಬಂದ ಅನಂತರ ಪರಿಶೀಲಿಸಿದಾಗ ನಗದು ಹಾಗೂ ಮೊಬೈಲ್ ಫೋನ್, ಚಾರ್ಜರ್ ಇಂಟರ್‌ನೆಟ್ ಮೋಡೆಮ್ ಕಳವಾಗಿದ್ದು ತಿಳಿದುಬಂದಿದೆ.ಅನ0ತರ ಸಂಪೂರ್ಣ ಮಳಿಗೆಯನ್ನು ಪರಿಶೀಲಿಸಿದಾಗ ಮಳಿಗೆಯ ಎಡಭಾಗದಲ್ಲಿದ್ದ ಬಾಗಿಲಿನ ಪಕ್ಕದ್ದಲ್ಲಿ ತಗಡು ಶೀಟನ್ನು ಕತ್ತರಿಸಿ ತೆಗೆದಿರುವುದು ಕಂಡುಬAದಿದೆ. ಅದರ ಮೂಲಕ ಯಾರೋ ಕಳ್ಳರು ಒಳ ಪ್ರವೇಶಿಸಿ ಕಳವು ಮಾಡಿದ್ದಾರೆ.


ಈ ಕುರಿತಂತೆ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

ಮಂಗಳೂರು: ವಿಶ್ವ ಸೈಕಲ್ ದಿನಾಚರಣೆ-2026ರ ಅಂಗವಾಗಿ ‘ಸಂಡೇಸ್ ಆನ್ ಸೈಕಲ್’ ಸೈಕಲ್ ಜಾಥಾ ಆಯೋಜನೆ..!

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

error: Content is protected !!