ಮಂಗಳೂರು; ಬಂದರ್ನ ಅಜೀಜುದ್ದೀನ್ ರಸ್ತೆಯಲ್ಲಿ ಮೊಹಮ್ಮದ್ ಮುದಸ್ಸಿರ್ ಅವರಿಗೆ ಸೇರಿದ ಟಿ.ವಿ.ಎಸ್. ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳ ಬಿಡಿಭಾಗಗಳ ದಾಸ್ತಾನು ಹಾಗೂ ವ್ಯಾಪಾರ ಮಳಿಗೆಯಿಂದ 39,370 ರೂ. ನಗದು, 4 ಮೊಬೈಲ್ ಫೋನ್ ಮತ್ತು ಚಾರ್ಜರ್ ಹಾಗೂ ಇಂಟರ್ನೆಟ್ ಮೋಡೆಮ್ ಕಳವಾಗಿದೆ.
ಆ. 26ರಂದು ಸಂಜೆ 6.30ಕ್ಕೆ ಮಳಿಗೆಯನ್ನು ಮುಚ್ಚಿ ಹೋಗಿದ್ದು, 27ರಂದು ರವಿವಾರವಾದ್ದರಿಂದ ಮಳಿಗೆ ತೆರೆದಿರಲಿಲ್ಲ. 28ರಂದು 9ಗಂಟೆಗೆ ಮಳಿಗೆ ತೆರೆದು ನಗದು ಕೌಂಟರಿಗೆ ಹೋದಾಗ ಕೌಂಟರಿನ ಹಣ ಇಡುವ ಡ್ರಾವರ್ ಬೀಗ ತೆರೆದ ಸ್ಥಿತಿಯಲ್ಲಿತ್ತು. ಮ್ಯಾನೇಜರ್ಗೆ ಕರೆ ಮಾಡಿ ವಿಚಾರ ತಿಳಿಸಿದ್ದು, ಅವರು ಸ್ಥಳಕ್ಕೆ ಬಂದ ಅನಂತರ ಪರಿಶೀಲಿಸಿದಾಗ ನಗದು ಹಾಗೂ ಮೊಬೈಲ್ ಫೋನ್, ಚಾರ್ಜರ್ ಇಂಟರ್ನೆಟ್ ಮೋಡೆಮ್ ಕಳವಾಗಿದ್ದು ತಿಳಿದುಬಂದಿದೆ.ಅನ0ತರ ಸಂಪೂರ್ಣ ಮಳಿಗೆಯನ್ನು ಪರಿಶೀಲಿಸಿದಾಗ ಮಳಿಗೆಯ ಎಡಭಾಗದಲ್ಲಿದ್ದ ಬಾಗಿಲಿನ ಪಕ್ಕದ್ದಲ್ಲಿ ತಗಡು ಶೀಟನ್ನು ಕತ್ತರಿಸಿ ತೆಗೆದಿರುವುದು ಕಂಡುಬAದಿದೆ. ಅದರ ಮೂಲಕ ಯಾರೋ ಕಳ್ಳರು ಒಳ ಪ್ರವೇಶಿಸಿ ಕಳವು ಮಾಡಿದ್ದಾರೆ.
ಈ ಕುರಿತಂತೆ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…