ಮಂಗಳೂರು; ಬಂದರ್ನ ಅಜೀಜುದ್ದೀನ್ ರಸ್ತೆಯಲ್ಲಿ ಮೊಹಮ್ಮದ್ ಮುದಸ್ಸಿರ್ ಅವರಿಗೆ ಸೇರಿದ ಟಿ.ವಿ.ಎಸ್. ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳ ಬಿಡಿಭಾಗಗಳ ದಾಸ್ತಾನು ಹಾಗೂ ವ್ಯಾಪಾರ ಮಳಿಗೆಯಿಂದ 39,370 ರೂ. ನಗದು, 4 ಮೊಬೈಲ್ ಫೋನ್ ಮತ್ತು ಚಾರ್ಜರ್ ಹಾಗೂ ಇಂಟರ್ನೆಟ್ ಮೋಡೆಮ್ ಕಳವಾಗಿದೆ.
ಆ. 26ರಂದು ಸಂಜೆ 6.30ಕ್ಕೆ ಮಳಿಗೆಯನ್ನು ಮುಚ್ಚಿ ಹೋಗಿದ್ದು, 27ರಂದು ರವಿವಾರವಾದ್ದರಿಂದ ಮಳಿಗೆ ತೆರೆದಿರಲಿಲ್ಲ. 28ರಂದು 9ಗಂಟೆಗೆ ಮಳಿಗೆ ತೆರೆದು ನಗದು ಕೌಂಟರಿಗೆ ಹೋದಾಗ ಕೌಂಟರಿನ ಹಣ ಇಡುವ ಡ್ರಾವರ್ ಬೀಗ ತೆರೆದ ಸ್ಥಿತಿಯಲ್ಲಿತ್ತು. ಮ್ಯಾನೇಜರ್ಗೆ ಕರೆ ಮಾಡಿ ವಿಚಾರ ತಿಳಿಸಿದ್ದು, ಅವರು ಸ್ಥಳಕ್ಕೆ ಬಂದ ಅನಂತರ ಪರಿಶೀಲಿಸಿದಾಗ ನಗದು ಹಾಗೂ ಮೊಬೈಲ್ ಫೋನ್, ಚಾರ್ಜರ್ ಇಂಟರ್ನೆಟ್ ಮೋಡೆಮ್ ಕಳವಾಗಿದ್ದು ತಿಳಿದುಬಂದಿದೆ.ಅನ0ತರ ಸಂಪೂರ್ಣ ಮಳಿಗೆಯನ್ನು ಪರಿಶೀಲಿಸಿದಾಗ ಮಳಿಗೆಯ ಎಡಭಾಗದಲ್ಲಿದ್ದ ಬಾಗಿಲಿನ ಪಕ್ಕದ್ದಲ್ಲಿ ತಗಡು ಶೀಟನ್ನು ಕತ್ತರಿಸಿ ತೆಗೆದಿರುವುದು ಕಂಡುಬAದಿದೆ. ಅದರ ಮೂಲಕ ಯಾರೋ ಕಳ್ಳರು ಒಳ ಪ್ರವೇಶಿಸಿ ಕಳವು ಮಾಡಿದ್ದಾರೆ.
ಈ ಕುರಿತಂತೆ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…