ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದ ಅರಬ್ಬಿ ಸಮುದ್ರದಲ್ಲಿ ಅಪರೂಪಕ್ಕೆ ವಿಶೇಷ ಮೀನುಗಳು ಸಿಗುವ ಮೂಲಕ ಅಚ್ಚರಿಯನ್ನು ಮೂಡಿಸುತ್ತವೆ.
ಈ ಬಾರಿ ಕಾರವಾರದ ಅರಬ್ಬಿ ಸಮುದ್ರದಲ್ಲಿ ದೇಶದಲ್ಲೇ ಮೊದಲ ಬಾರಿ ಎಂದು ಹೇಳಲಾಗುತ್ತಿರುವ ಅತಿ ಉದ್ದದ ಹಾಗೂ ಹೆಚ್ಚು ತೂಕದ ಬಂಗುಡೆ ಮೀನು ಮೀನುಗಾರರ ಬಲೆಗೆ ಬಿದ್ದಿದೆ.
ಕಾರವಾರದ ಬೈತಖೋಲ್ ಬಂದರಿನಲ್ಲಿ ನವೀನ್ ಹರಿಕಾಂತ್ರ ಎಂಬುವವರಿಗೆ ಆಳ ಸಮುದ್ರ ಬಿಡ್ಡಬಲೆ ದೋಣಿಗೆ ಈ ಮೀನು ಸಿಕ್ಕಿದೆ. ಈ ಮೀನನ್ನು ವಿನಾಯಕ್ ಖರೀದಿಸಿ ಕಡಲ ವಿಜ್ಞಾನ ವಿಭಾಗದ ಕೇಂದ್ರಕ್ಕೆ ನೀಡಿದ್ದಾರೆ. ಈ ಮೀನು 19 ಇಂಚು ಉದ್ದ ಮತ್ತು 4.5 ಇಂಚು ಅಗಲ ಇದ್ದು, ಒಂದು ಕೆಜಿ ತೂಕವಿದೆ.
ಬಂಗುಡೆ ಮೀನು ಎನ್ನುವುದು ಮೀನುಗಳ 30 ಜಾತಿಗಳನ್ನು ಒಳಗೊಂಡಿರುವಂತಹ ಸಾಮಾನ್ಯ ಪದವಾಗಿದೆ. ಇದರಲ್ಲಿ ಹೆಚ್ಚಿನವುಗಳು ಸ್ಕಾಂಬ್ರಿಡೇಗೆ ಸೇರಿರುವವು. ವಿಶ್ವದ ಹೆಚ್ಚಿನ ಭಾಗಗಳಲ್ಲಿ ಮಾರ್ಕೆಲ್ ಮೀನನ್ನು ಬಂಗುಡೆ ಎಂದು ಕರೆಯಲಾಗುತ್ತದೆ.
ಬಂಗುಡೆ ಮೀನು ಹೆಚ್ಚಾಗಿ ಕರಾವಳಿ ಭಾಗದಲ್ಲಿ ಕಂಡುಬರುವುದು. ಇದು ಅಲ್ಲಿಯೇ ಮೊಟ್ಟೆಯನ್ನಿಡುವುದು ಮತ್ತು ಬೆಳೆಯುವುದು. ಇವುಗಳು ಹೆಚ್ಚಾಗಿ ಉಷ್ಣವಲಯ ಹಾಗೂ ಸಮಶೀತೋಷ್ಣವಲಯಗಳಲ್ಲಿ ಕಂಡುಬರುತ್ತವೆ. ಬಂಗುಡೆ ಮೀನುಗಳು ದೊಡ್ಡ ಪ್ರಮಾಣದಲ್ಲಿ ಸಿಗುವ ಕಾರಣದಿಂದಾಗಿ ಇದು ಮೀನುಗಾರರಿಗೆ ದೊಡ್ಡ ಮಟ್ಟದಲ್ಲಿ ಹಣವನ್ನು ಸಂಪಾದಿಸಿ ಕೊಡುತ್ತದೆ. ಈ ಕಾರಣದಿಂದಾಗಿ ಬಂಗುಡೆ ಮೀನು ತುಂಬಾ ಜನಪ್ರಿಯವಾಗಿದೆ. ಇದು ಉತ್ತರ ಅಮೆರಿಕದ ಆಹಾರದ ಪ್ರಮುಖ ಭಾಗವಾಗಿದೆ. 20 ಸೆ.ಮೀ.ನಿಂದ 200 ಸೆ.ಮೀ. ತನಕ ಇರುವಂತಹ ಈ ಮೀನುಗಳು ದೈಹಿಕವಾಗಿ ಬೇರೆ ಬೇರೆ ವಿನ್ಯಾಸ ಹೊಂದಿರುವುದು. ಆದರ ಇದು ಒಂದೇ ರೀತಿಯ ರುಚಿ ಹಾಗೂ ಉತ್ತಮ ಪೋಷಕಾಂಶಗಳನ್ನು ಹೊಂದಿರುತ್ತವೆ.
ಈ ಮೀನು ಹೆಚ್ಚು ಎಂದರೆ 300 ಗ್ರಾಂವರೆಗೆ ತೂಕವಿರುತ್ತದೆ. ಗಂಡು ಬಂಗುಡೆ 36 ಸೆಂ.ಮೀ, ಹೆಣ್ಣು ಬಂಗುಡೆ 42 ಸೆಂ.ಮೀ ಅತೀ ದೊಡ್ಡದು ಎಂದು ಭಾರತದಲ್ಲಿ ವರದಿಯಾಗಿತ್ತು. ಆದರೆ ಕಾರವಾರದಲ್ಲಿ ಸಿಕ್ಕ ಈ ಬಂಗುಡೆ 48 ಸೆಂ.ಮೀ. ಇದೆ ಹಾಗಾಗಿ ಇದು ದೇಶದಲ್ಲೇ ಅತಿ ದೊಡ್ಡ ಮೀನಾಗಿರಬಹುದು ಎಂದು ಕಾರವಾರದ ಕಡಲ ಜೀವಶಾಸ್ತ್ರ ವಿಭಾಗದ ಶಿವಕುಮಾರ್ ಹರಿಗಿಯವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…