ದಕ್ಷಿಣ ಕನ್ನಡ : ಮಂಗಳೂರು ನಗರದ ರಾಧಾಕೃಷ್ಣ ದೇವಸ್ಥಾನದ ಆವರಣದಲ್ಲಿರುವ ಬಾಳಂ ಭಟ್ ಹಾಲ್ ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ದಿನಾಂಕ 31- 08 -2023ರಿಂದ 09- 09- 2023 ವರೆಗೆ ಒಟ್ಟು ಹತ್ತು ದಿನಗಳ ಧಾರ್ಮಿಕ, ಸಾಂಸ್ಕೃತಿಕ, ಅಷ್ಟಾವಧಾನ,ಭಜನಾ ಸಂಕೀರ್ತನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಧಾಕೃಷ್ಣ ದೇವಸ್ಥಾನದ ಮುಖ್ಯಸ್ಥರಾದ ವೇದಮೂರ್ತಿ ಗಿರಿಧರ ಭಟ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ದಿನಾಂಕ 31 ರಿಂದ ಹತ್ತು ದಿನಗಳು ನಿತ್ಯ ಸಾಯಂಕಾಲ ಗಂಟೆ 5 ರಿಂದ ಭಜನಾ ಸಂಕೀರ್ತನೆ ನಂತರ ಅಷ್ಟಾವಧಾನ ಬಳಿಕ ಮಹಾಪೂಜೆ ಪ್ರಸಾದ ವಿತರಣೆ ನಡೆಯಲಿದ್ದು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಲಾಗಿದೆ.
ದಿನಾಂಕ 06-09-2023 ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ವಿಶೇಷ ಕಾರ್ಯಕ್ರಮಗಳ ಹಮ್ಮಿಕೊಳ್ಳಲಾಗಿದ್ದು, ಬೆಳಿಗ್ಗೆ ಗಂಟೆ 8 ರಿಂದ ಹರಿಕಥಾ ಕಾಲಾಮೃತ, ಬಳಿಕ “ಮುದ್ದುಕೃಷ್ಣ” ಸ್ಪರ್ಧೆ ಹಾಗೂ “ರಾಧಾಕೃಷ್ಣ” ರೂಪಕ ಸ್ಪರ್ಧೆ ನಡೆಯಲಿದ್ದು ವಿಜೇತರಿಗೆ ಬಹುಮಾನ ನೀಡಿ ಗೌರವಿಸಲಾಗುವುದು, ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವವರು ಮಂಗಳೂರು ರಾಧಾಕೃಷ್ಣ ದೇವಸ್ಥಾನದ ಕಚೇರಿಯನ್ನು ಅಥವಾ ಮುಖ್ಯಸ್ಥರನ್ನು ಸಂಪರ್ಕಿಸಬಹುದಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.
ದಿನಾಂಕ 09-09-2023 ಯಂದು ಪುಷ್ಪಾಲಂಕಾರ ಪೂಜೆ, ಭಜನಾ ಮಂಗಲೋತ್ಸವ ಕಾರ್ಯಕ್ರಮವಿದ್ದು, ಸಮಾಜ ಬಾಂಧವರು, ಭಕ್ತಾದಿಗಳು, ಸಾರ್ವಜನಿಕರು ನಿತ್ಯವೂ ಸಕ್ರಿಯವಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಮಂಗಳೂರು ರಾಧಾಕೃಷ್ಣ ದೇವಸ್ಥಾನದ ಮುಖ್ಯಸ್ಥರು ವಿನಂತಿಸಿರುತ್ತಾರೆ.
ಮಿಜಾರ್ ಸಮೀಪ ಬಾಡಿಗೆ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಮೂವರು ಗಾಯಗೊಂಡ ಘಟನೆ ನಡೆದಿದೆ. ಘಟನೆಯಲ್ಲಿ ಆಳ್ವಾಸ್ ಕಾಲೇಜಿನ ಕೆಲಸಗಾರ ಶಿವರಾಮ,…
ನೀಟ್ ಮರು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ಕೋಚಿಂಗ್ ಸೆಂಟರ್ನ ಹಾಸ್ಟೆಲ್ನಲ್ಲಿ ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದ ದುರಂತ ಮಾಸುವ ಮುನ್ನವೇ,…
ಕೊಲಂಬಿಯಾದ ಪಶ್ಚಿಮ ಭಾಗದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 111 ಮಂದಿ ಮೃತಪಟ್ಟಿದ್ದಾರೆ. 87ಕ್ಕೂ ಹೆಚ್ಚು ಮಂದಿ…
ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ವಿಟ್ಲ ಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ…
ಪಾದಚಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತಲಪಾಡಿಯಲ್ಲಿ ನಡೆದಿದೆ. ಗದಗ ನಿವಾಸಿ ಶರಣಪ್ಪ ಗಂಭೀರ…
ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕ…