ಮಂಗಳೂರು; ಖಾಸಗಿ ಬಸ್ಸಿನ ಬಾಗಿಲಿನಲ್ಲಿ ನೇತಾಡುತ್ತಿದ್ದ ಬಸ್ ಕಂಡೆಕ್ಟರ್ ಹೊರಕ್ಕೆ ಎಸೆಯಲ್ಪಟ್ಟು ತಲೆಗೆ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ನಗರದ ನಂತೂರು ವೃತ್ತದಲ್ಲಿನ ನಡೆದಿದೆ.
15 ನಂಬರಿನ ಬಸ್ ಕದ್ರಿ ಕೆಪಿಟಿಯಿಂದ ಬಂದು ನಂತೂರು ವೃತ್ತದಲ್ಲಿ ಸಡನ್ ತಿರುವು ಪಡೆದಿದ್ದು ಎದುರಿನ ಬಾಗಿಲಲ್ಲಿ ನಿಂತಿದ್ದಕಂಡೆಕ್ಟರ್ ಕೆಳಕ್ಕೆ ಎಸೆಯಲ್ಪಟ್ಟಿದ್ದಾನೆ. ಬಸ್ ನಿರ್ವಾಹಕನಾಗಿದ್ದ ಮೂಲತಃ ಬಾಗಲಕೋಟ ಜಿಲ್ಲೆಯ ನಿವಾಸಿ, ಸದ್ಯ ಸುರತ್ಕಲ್ ತಡಂಬೈಲ್ ನಲ್ಲಿ ವಾಸವಿದ್ದ ಈರಯ್ಯ (23) ನೇರವಾಗಿ ರಸ್ತೆಗೆ ಎಸೆಯಲ್ಪಟ್ಟಿದ್ದು ಕೂಡಲೇ ಅಲ್ಲಿದ್ದ ಸ್ಥಳೀಯ ಪೊಲೀಸರು ಮತ್ತು ಸಾರ್ವಜನಿಕರು ಸೇರಿ ಯುವಕನನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ತಲೆಯ ಭಾಗಕ್ಕೆ ತೀವ್ರ ಪೆಟ್ಟು ಬಿದ್ದ ಕಾರಣ ರಾತ್ರಿ 8 ಗಂಟೆ ಸುಮಾರಿಗೆ ಯುವಕ ಸಾವನ್ನಪ್ಪಿದ್ದಾನೆ. ಇದರ ವಿಡಿಯೋ ಎದುರಿನ ವಾಹನದಲ್ಲಿದ್ದ ಫ್ರಂಟ್ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದ್ದು ಇ ದೀಗ ಜಾಲತಾಣದಲ್ಲಿ ವೈರಲ್ ಆಗಿದೆ. ಬಸ್ ವೇಗವಾಗಿ ಚಲಿಸಿದ್ದರಿಂದಲೇ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕದ್ರಿ ಸಂಚಾರಿ ಠಾಣೆಯಲ್ಲಿ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ಕಲೆಕ್ಷನ್ ಮಾಡುವ ಮತ್ತು ಟೈಮ್ ಕೀಪಿಂಗ್ ಭರದಲ್ಲಿ ನಗರದ ಖಾಸಗಿ ಬಸ್ ನಿರ್ವಾಹಕರು, ಚಾಲಕರು ಎರ್ರಾಬಿರ್ರಿಯಾಗಿ ವರ್ತಿಸುತ್ತಿದ್ದು, ಬಸ್ತಿನಲ್ಲಿ ಸಿಬಂದಿಯಾಗಿದ್ದ ಯುವಕನೊಬ್ಬ ಬಲಿಯಾಗಿದ್ದಾನೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…