ವಿಜಯನಗರದ ಹಂಪಿಯ ವಿಠ್ಠಲ ಸ್ಮಾರಕ ಬಳಿ ಅಪರೂಪದ ಹಾವು ಪತ್ತೆಯಾಗಿದೆ. ಬಿಳಿ ಬಣ್ಣದ ಮಣ್ಮುಕ್ ತಳಿಯ ಹಾವನ್ನು ನೋಡಿದ ಜನರು ಕೆಲ ಹೊತ್ತು ಆತಂಕಕ್ಕೆ ಒಳಗಾಗಿದ್ದರು.
ಕೂಡಲೇ ಅಲ್ಲಿನ ಸ್ಥಳೀಯರು ಉರಗ ರಕ್ಷಕ ಮಲ್ಲಿಕಾರ್ಜುನಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ಹಾವನ್ನು ರಕ್ಷಣೆ ಮಾಡಿದ್ದಾರೆ.
ಪಿಗ್ಮೇಂಟ್ ಕೊರತೆಯಿಂದ ಚರ್ಮಕ್ಕೆ ಬಣ್ಣ ಬಾರದೆ ಬಿಳಿ ಬಣಕ್ಕೆ ಹಾವು ತಿರುಗಿದೆ. ಹಂಪಿಯಲ್ಲಿ ಕಾಣಿಸಿಕೊಂಡ ಬಿಳಿ ಬಣ್ಣದ ಹಾವು ವಿಷಕಾರಿಯಲ್ಲ ಎಂಬ ಮಾಹಿತಿಯನ್ನು ಉರಗ ರಕ್ಷಕ ತಿಳಿಸಿದರು. ಬಳಿಕ ಅಲ್ಲಿದ್ದ ಸ್ಥಳೀಯರು ಮತ್ತು ಪ್ರವಾಸಿಗರು ನಿಟ್ಟುಸಿರು ಬಿಟ್ಟರು. ನಂತರ ರಕ್ಷಣೆ ಮಾಡಿದ ಹಾವನ್ನು ಸುರಕ್ಷಿತ ಪ್ರದೇಶದಲ್ಲಿ ಮಲ್ಲಿಕಾರ್ಜುನ ಬಿಟ್ಟು ಬಂದಿದ್ದಾರೆ.
ಮಿಜಾರ್ ಸಮೀಪ ಬಾಡಿಗೆ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಮೂವರು ಗಾಯಗೊಂಡ ಘಟನೆ ನಡೆದಿದೆ. ಘಟನೆಯಲ್ಲಿ ಆಳ್ವಾಸ್ ಕಾಲೇಜಿನ ಕೆಲಸಗಾರ ಶಿವರಾಮ,…
ನೀಟ್ ಮರು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ಕೋಚಿಂಗ್ ಸೆಂಟರ್ನ ಹಾಸ್ಟೆಲ್ನಲ್ಲಿ ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದ ದುರಂತ ಮಾಸುವ ಮುನ್ನವೇ,…
ಕೊಲಂಬಿಯಾದ ಪಶ್ಚಿಮ ಭಾಗದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 111 ಮಂದಿ ಮೃತಪಟ್ಟಿದ್ದಾರೆ. 87ಕ್ಕೂ ಹೆಚ್ಚು ಮಂದಿ…
ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ವಿಟ್ಲ ಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ…
ಪಾದಚಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತಲಪಾಡಿಯಲ್ಲಿ ನಡೆದಿದೆ. ಗದಗ ನಿವಾಸಿ ಶರಣಪ್ಪ ಗಂಭೀರ…
ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕ…